ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೇಸಿ ಕ್ರೀಡೆಗೆ ಪ್ರೋತ್ಸಾಹಿಸಿ’

Last Updated 22 ಸೆಪ್ಟೆಂಬರ್ 2013, 19:54 IST
ಅಕ್ಷರ ಗಾತ್ರ

ಕೃಷ್ಣರಾಜಪುರ: ‘ಶಾಲಾಮಟ್ಟ ದಲ್ಲಿಯೇ ದೇಸಿ ಕ್ರೀಡೆಗಳಾದ ಕಬಡ್ಡಿ, ಕೊಕ್ಕೊ ಮತ್ತಿತರ ಆಟಗಳನ್ನು ಮಕ್ಕಳಿಗೆ ಕಲಿಸಲು ಹೆಚ್ಚಿನ ಉತ್ತೇಜನ ನೀಡಬೇಕು’ ಎಂದು  ಶಾಸಕ ಬೈರತಿ ಎ.ಬಸವರಾಜು ಸಲಹೆ ನೀಡಿದರು.

ಸ್ಥಳೀಯ ಅಂಬೇಡ್ಕರ್‌ ಕ್ರೀಡಾಂಗಣ ದಲ್ಲಿ ಈಚೆಗೆ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬೆಂಗಳೂರು ದಕ್ಷಿಣ ಜಿಲ್ಲೆಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಡಿ. ಮನೋಹರ್‌, ತಾಲ್ಲೂಕು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಎಚ್‌. ನಾಗರಾಜ್‌ ಹಾಜರಿದ್ದರು.

ವಿವಿಧ ಶಾಲೆಗಳ 600ಕ್ಕೂ ಅಧಿಕ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT