ತಿಪಟೂರು: ಸರ್ಕಾರಿ ಸೇವೆಯಿಂದ ನಿವೃತ್ತರಾದರೂ ಸಂಘಟನೆಯಿಂದ ಸಹಕಾರದ ಮೂಲಕ ಸಾಮಾಜಿಕ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ನಿವೃತ್ತ ನೌಕರರು ಯುವಕರಿಗೆ ಮಾದರಿಯಾಗಿದ್ದಾರೆ ಎಂದು ಶಾಸಕ ಕೆ.ಷಡಕ್ಷರಿ ಹೇಳಿದರು.
ನಗರದ ಗುರುಕುಲಾನಂದಶ್ರಮದಲ್ಲಿ ಮಂಗಳವಾರ ನಡೆದ ನಿವೃತ್ತ ನೌಕರರ ದಿನಾಚರಣೆ, ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಜೀವನದಲ್ಲಿ ವಯಸ್ಸು, ಆಯಸ್ಸು, ದುಡಿಮೆ ಈ 3 ಕಾಲಗಳಿಗೆ ಬಹಳ ಮಹತ್ವ ನೀಡಿದರೆ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದರು. ಬಿಇಒ ಬಿ.ಜೆ.ಪ್ರಭುಸ್ವಾಮಿ ಮಾತನಾಡಿದರು. ಜಿಲ್ಲಾ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಂ.ಆರ್.ಬೋಬಡೆ, ತಾಲ್ಲೂಕು ಸಂಘದ ಅಧ್ಯಕ್ಷ ಜಿ.ಟಿ. ಶಂಕರೇಗೌಡ ಮಾತನಾಡಿದರು.
75 ವರ್ಷ ತುಂಬಿದ ಸಂಘದ ಹಿರಿಯ ಹತ್ತು ಸದಸ್ಯರನ್ನು ಸನ್ಮಾನಿಸಲಾಯಿತು. ಸಂಘದ ಕಾರ್ಯದರ್ಶಿ ಕೆ.ಬಾಲಕೃಷ್ಣ ವಾರ್ಷಿಕ ವರದಿ ಮಂಡಿಸಿದರು. ವಿ.ಎನ್. ಮಹಾದೇವಯ್ಯ ಸ್ವಾಗತಿಸಿದರು.