ತಲಘಟ್ಟಪುರ: ‘ನಮ್ಮ ದೇಶವು ಅಟೋಮೊಬೈಲ್, ಕಂಪ್ಯೂಟರ್ ಶಿಕ್ಷಣದಲ್ಲಿ ಇಂಗ್ಲೆಂಡ್, ಫ್ರಾನ್ಸ್ ರಾಷ್ಟ್ರಗಳಿಗೆ ಸರಿಸಾಟಿಯಾಗಿ ಪ್ರಗತಿಯ ಹಾದಿಯಲ್ಲಿದೆ. ಆದರೆ, ಬಡವರಿಗೆ ಉನ್ನತ ಶಿಕ್ಷಣ ನೀಡುವಲ್ಲಿ ನಾವು ವಿಫಲರಾಗಿದ್ದೇವೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಳವಳ ವ್ಯಕ್ತಪಡಿಸಿದರು.
ಸೋಮನಹಳ್ಳಿ ಬಳಿ ಆಚಾರ್ಯ ಪಾಠಶಾಲಾ ಪಾಲಿಟೆಕ್ನಿಕ್ನ ‘ಅನಂತಜ್ಞಾನ ಗಂಗೋತ್ರ’ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ವಾಸ್ತುಶಾಸ್ತ್ರ, ಅಟೋಮೊಬೈಲ್, ಕಂಪ್ಯೂಟರ್ ಸೈನ್ಸ್ ವಿಭಾಗಗಳ ನೂತನ ಕಟ್ಟಡಗಳನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.
‘ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರೀಕರಣ ಮನೋಭಾವ ಬಿಟ್ಟು ಗ್ರಾಮೀಣ ಪ್ರದೇಶದ ಕಡುಬಡವರಿಗೆ ಸಂಸ್ಥೆಗಳಲ್ಲಿ ಪ್ರವೇಶಾವಕಾಶ ಕಲ್ಪಿಸಬೇಕು. ಆಗ ಮಾತ್ರ ಭಾರತ ಬಲಿಷ್ಠ, ರಾಷ್ಟ್ರವಾಗಲು ಸಾಧ್ಯ’ ಎಂದರು. ಸಂಸ್ಥೆಯ ಆಡಳಿತಾಧಿಕಾರಿ ಬಿ.ವಿ.ರೆಡ್ಡಿ, ಆಡಳಿತ ಮಂಡಳಿಯ ಮೋಹನ್ದೇವ್ ಆಳ್ವ, ರಾಜಶೇಖರಪ್ಪ, ಸಿ.ನಾಗರಾಜ್, ಪ್ರಾಂಶುಪಾಲರಾದ ಎಸ್.ಶೈಲ ಇದ್ದರು.