ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಾಲ್ಯದಲ್ಲೇ ಭಾಷಾಭಿಮಾನ ಬೆಳೆಯಲಿ’

Last Updated 17 ಡಿಸೆಂಬರ್ 2013, 6:03 IST
ಅಕ್ಷರ ಗಾತ್ರ

ಕಾರಟಗಿ: ಕನ್ನಡಭಾಷೆ, ನೆಲ, ಜಲ ಮೊದಲಾದ ವಿಷಯಗಳ ಅಭಿಮಾನ ಬಾಲ್ಯದಲ್ಲಿಯೇ ಬೆಳೆಯಬೇಕು. ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗೆ ಸೇರಿಸುವುದರಿಂದ ಭಾಷಾಭಿಮಾನ ಬೆಳೆಯುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ವೀರೇಶ್ ಸಾಲೋಣಿ ಹೇಳಿದರು.
ಜಾಗೃತ ಯುವಕ ಸಂಘ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ‘ಕನ್ನಡ ನುಡಿಹಬ್ಬ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿ.ಪಂ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಅಮರೇಶ್ ಕುಳಗಿ ಮಾತನಾಡಿ, ಕನ್ನಡ ಭಾಷೆಯ ಅಭಿಮಾನ ಮೂಡಿಸುವ ಕಾರ್ಯ ದಲ್ಲಿ ಸದಾಕಾಲ ನಡೆಯಲಿ ಎಂದರು.

ಜಿ.ಪಂ ಸದಸ್ಯೆ ಜ್ಯೋತಿ ಬಿಲ್ಗಾರ್, ತಾ.ಪಂ ಸದಸ್ಯ ಹಿರೇಬಸಪ್ಪ ಸಜ್ಜನ್, ಸಂಘದ ಗೌರವಾಧ್ಯಕ್ಷ ಪ್ರಹ್ಲಾದ ಜೋಷಿ, ಶರಣಪ್ಪ ಕೋಟ್ಯಾಳ ಮಾತನಾಡಿದರು.

ಗ್ರಾ.ಪಂ ಅಧ್ಯಕ್ಷ ಬಿ. ಶರಣಯ್ಯಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಶಿವರೆಡ್ಡಿ ನಾಯಕ, ತಾ.ಪಂ ಸದಸ್ಯೆ ಗಂಗಮ್ಮ, ಸಂಘದ ಅಧ್ಯಕ್ಷ ಎಂ.ಸಂದೀಪಗೌಡ ಇದ್ದರು. ರಾಮು ನಾಯಕ, ಶರಣಪ್ಪ ಕೋಟ್ಯಾಳ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT