ನವದೆಹಲಿ (ಪಿಟಿಐ): ದೇಶದ ಹಣ ಕಾಸು ಮಾರುಕಟ್ಟೆ ಸ್ಥಿರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳಿಗೆ ಅಗತ್ಯವಾಗಿರುವ ಸುಮಾರು ರೂ.14 ಸಾವಿರ ಕೋಟಿಯಷ್ಟು ಬಂಡವಾಳವನ್ನು ಮುಂದಿನ 10ರಿಂದ 15 ದಿನಗಳ ಒಳಗೆ ಪೂರೈಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.
‘ಹಣಕಾಸು ಮಾರುಕಟ್ಟೆಯಲ್ಲಿ ವಿಶ್ವಾಸ ಮರಳಿರುವ ಸೂಚನೆಗಳು ಕಂಡು ಬಂದಿವೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗನೆ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಗೆ ಬಂಡವಾಳ ಒದಗಿಸಲಾಗುವುದು’ ಎಂದು ಹಣಕಾಸು ಸೇವೆಗಳ ಕಾರ್ಯದರ್ಶಿ ರಾಜೀವ್ ಟಕ್ರು ಇಲ್ಲಿ ಸುದ್ದಿಗಾರರಿಗೆ ಶುಕ್ರವಾರ ತಿಳಿಸಿದರು.
ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ವಸೂಲಾಗದ ಸಾಲ ಪ್ರಮಾಣ(ಎನ್ಪಿಎ) ಹೆಚ್ಚುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಇದೇನೂ ಅಷ್ಟು ಅಪಾಯಕಾರಿ ಮಟ್ಟದಲ್ಲಿಲ್ಲ. ಬ್ಯಾಂಕ್ಗಳು ಈಗಾಗಲೇ ಸಾಲ ವಸೂಲಿಗೆ ಅಗತ್ಯ ಕ್ರಮ ಕೈಗೊಂಡಿವೆ. ಸೆ. 27ರಂದು ಈ ಬಗ್ಗೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ ಎಂದರು.