ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಭಾಷಾ ಪ್ರೌಢಿಮೆ ತಿಳಿಯಲು ಪುಸ್ತಕಗಳ ಅಧ್ಯಯನ ಅಗತ್ಯ’

Last Updated 20 ಸೆಪ್ಟೆಂಬರ್ 2013, 19:30 IST
ಅಕ್ಷರ ಗಾತ್ರ

ನೆಲಮಂಗಲ: ‘ಕನ್ನಡ ಪದ ಸಂಪತ್ತು ಆದರ್ಶವನ್ನು ಬೆಳೆಸುತ್ತಿದೆ. ಉತ್ತಮ ಚಿಂತನೆಗಳನ್ನು ಮೂಡಿಸುವ ಆಚಾರ, ವಿಚಾರ, ಸಂಸ್ಕೃತಿಯನ್ನು ತಿಳಿಸಿಕೊ ಡುತ್ತದೆ, ಕನ್ನಡದ ಭಾಷಾ ಪ್ರೌಢಿಮೆ ತಿಳಿದುಕೊಳ್ಳಲು ಹೆಚ್ಚು ಹೆಚ್ಚು ಪುಸ್ತಕಗಳನ್ನು ಅಧ್ಯಯನ ಮಾಡಬೇಕು ಎಂದು ಸಂಪನ್ಮೂಲ ವ್ಯಕ್ತಿ ಓಂಕಾರ ಪ್ರಿಯ ಬಾಗೆಪಲ್ಲಿ ಕೆ.ನಾಗರಾಜು ತಿಳಿಸಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗವು ಬಾಗೆಪಲ್ಲಿಯ ಕನ್ನಡ ಸಂಸ್ಕೃತಿ ಸೇವಾಭಾರತಿಯ ಸಹಯೋಗದಲ್ಲಿ ಏರ್ಪಡಿಸಿದ್ದ ‘ಕನ್ನಡ ಪದ ಸಂಪತ್ತು’ 910ನೇ ವಿಶೇಷ ಉಪನ್ಯಾಸ ಕಮ್ಮಟವನ್ನು ಅವರು ಮಾತನಾಡಿದರು.

ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಪರಮಶಿವಯ್ಯ ಅವರು ಕಾಲೇಜಿನ ಆವರಣದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ನಾಡಾಗಲಿ ಹಸಿರು, ಕನ್ನಡವಾಗಲಿ ಉಸಿರು ಎಂದರು. ನೆಲದನಿ ಬಾನುಲಿ ಕೇಂದ್ರದ ನಿರ್ದೇಶಕ ವೆಂಕಟೇಶ್ ಚೌಥಾಯಿ ಭಾಷೆಯ ಬಳಕೆಯ ಮಹತ್ವ ತಿಳಿಸಿದರು.

ಇದೇ ಸಂದರ್ಭದಲ್ಲಿ ಪ್ರೌಢಶಾಲೆಗೆ ನೀರು ಶುದ್ಧೀಕರಣ ಯಂತ್ರವನ್ನು ಕೊಡುಗೆಯಾಗಿ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ವ್ಯವಸ್ಥಾಪಕ ಗುರುರಾಜ್ ಗಲಗಲಿ ಅವರನ್ನು ಉಪಪ್ರಾಂಶುಪಾಲ ಶಿವ ಕುಮಾರಸ್ವಾಮಿ ಸನ್ಮಾನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT