ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಕ್ಕಳ ಶಿಕ್ಷಣ ಹಕ್ಕು ಆಯುಧವಾಗಲಿ’

Last Updated 20 ಡಿಸೆಂಬರ್ 2013, 6:50 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ:  ಮಕ್ಕಳ ಶಿಕ್ಷಣ ಹಕ್ಕು ಶೋಷಣೆಯ ವಿರುದ್ಧ ಆಯುಧ­ವಾಗ­ಬೇಕು ಎಂದು ತಾಲ್ಲೂಕಿನ ಕ್ಷೇತ್ರ
ಸಂಪನ್ಮೂಲ ಕೇಂದ್ರದ ಸಮನ್ವಯಾ­ಧಿಕಾರಿ ವೆಂಕಟೇಶ್ ತಿಳಿಸಿದರು.

ತಾಲ್ಲೂಕಿನಲ್ಲಿ ನಡೆಯುವ ಸಮುದಾಯ ಜಾಗೃತಿ ಶಿಬಿರವನ್ನು ಈಚೆಗೆ ನಗರದ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟಿಸಿ ಮಾತನಾಡಿದರು. ಈಗ ಆರ್‌ಟಿಇ ಕಾಯ್ದೆಯ ರೂಪದಲ್ಲಿ  ಜಾರಿಗೆ ಬಂದಿರುವ ಈ ಮಕ್ಕಳ ಹಕ್ಕು, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುತ್ತದೆ ಎಂದರು.

ಪ್ರಜ್ಞಾ ಟ್ರಸ್ಟ್‌ನ ಯೋಜನಾ ನಿರ್ದೇಶಕ ಎನ್. ನಾಗರಾಜ್ ಮಾತ­ನಾಡಿ ಕಲಾತಂಡವು ಸಮುದಾಯಕ್ಕೆ ಅರಿವು ಮೂಡಿಸುವ ಪ್ರಯತ್ನ ಮಾಡುತ್ತಿದೆ ಹೇಳಿದರು.

ಕಾರ್ಯಕ್ರಮದಲ್ಲಿ ಸಮೂಹ ಸಂಪನ್ಮೂಲವ್ಯಕ್ತಿ ಮಂಜುನಾಥರೆಡ್ಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಶಿಕ್ಷಕರು ಹಾಜರಿದ್ದರು. ತಂಡದಲ್ಲಿ ಸಂಯೋಜಕಿ- ರೂಪಾ, ಕಲಾವಿದರಾದ ಎಚ್.ಸಿ. ನರಸಿಂಹಮೂರ್ತಿ, ಕೆ. ನರಸಿಂಹ­ಮೂರ್ತಿ, ಕಿರಣ್, ಜಯಲಕ್ಷ್ಮಿ, ನಾರಾ­ಯಣಸ್ವಾಮಿ, ಗಾಯತ್ರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT