ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಕ್ಕಳಲ್ಲಿ ಒಳ್ಳೆಯ ಮೌಲ್ಯಗಳನ್ನು ಬೆಳೆಸಿ’

Last Updated 5 ಜನವರಿ 2014, 20:04 IST
ಅಕ್ಷರ ಗಾತ್ರ

ಬೆಂಗಳೂರು: ‘ಸಮಾಜದಲ್ಲಿ ಬದಲಾ­ವಣೆ­­ಯಾಗಬೇಕಾದರೆ  ಮಕ್ಕಳಲ್ಲಿ ಒಳ್ಳೆಯ ಮೌಲ್ಯಗಳನ್ನು ಬೆಳೆಸ ಬೇಕಾದ ಅಗತ್ಯವಿದೆ’ ಎಂದು ಹುಬ್ಬಳ್ಳಿ­ಯ ಆರ್ಷವಿದ್ಯಾ ಗುರುಕುಲದ ಸ್ವಾಮಿ ಚಿದ್ರೂಪಾನಂದ ಸರಸ್ವತಿ ಹೇಳಿದರು.

ವಿವೇಕಾನಂದ ಯೋಗ ಅನು­ಸಂಧಾನ ಸಂಸ್ಥಾನದ ವತಿಯಿಂದ ಭಾನು­ವಾರ ನಗರದಲ್ಲಿ ಆಯೋಜಿಸಿದ್ದ 20ನೇ ಅಂತರರಾಷ್ಟ್ರೀಯ ಯೋಗ ಸಮ್ಮೇಳನದ ಸಮಾರೋಪ ಸಮಾ­ರಂಭ ಮತ್ತು ಭಗವದ್ಗೀತಾ ಪುನರ್‌­ಮನನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಎಲ್ಲರೂ ನಮ್ಮ ಮುಂದಿನ ಪೀಳಿಗೆ ಉತ್ತಮವಾಗಿರಬೇಕು, ಮಕ್ಕಳಿಗೆ ಭವ್ಯ ಭವಿಷ್ಯವನ್ನು ಕಲ್ಪಿಸಬೇಕು ಎಂದು ಬಯಸುತ್ತಾರೆ. ಆದರೆ, ತಾವೇ ಸಾಮಾಜಿಕ, ನೈತಿಕ, ರಾಷ್ಟ್ರೀಯ ಮೌಲ್ಯ­ಗ­ಳನ್ನು  ಮರೆತಿರುತ್ತಾರೆ. ಇದರಿಂದ ಸಮಾಜದಲ್ಲಿ ಬದಲಾವಣೆ    ಸಾಧ್ಯವಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT