ಬೆಂಗಳೂರು: ‘ಸಮಾಜದಲ್ಲಿ ಬದಲಾವಣೆಯಾಗಬೇಕಾದರೆ ಮಕ್ಕಳಲ್ಲಿ ಒಳ್ಳೆಯ ಮೌಲ್ಯಗಳನ್ನು ಬೆಳೆಸ ಬೇಕಾದ ಅಗತ್ಯವಿದೆ’ ಎಂದು ಹುಬ್ಬಳ್ಳಿಯ ಆರ್ಷವಿದ್ಯಾ ಗುರುಕುಲದ ಸ್ವಾಮಿ ಚಿದ್ರೂಪಾನಂದ ಸರಸ್ವತಿ ಹೇಳಿದರು.
ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ ವತಿಯಿಂದ ಭಾನುವಾರ ನಗರದಲ್ಲಿ ಆಯೋಜಿಸಿದ್ದ 20ನೇ ಅಂತರರಾಷ್ಟ್ರೀಯ ಯೋಗ ಸಮ್ಮೇಳನದ ಸಮಾರೋಪ ಸಮಾರಂಭ ಮತ್ತು ಭಗವದ್ಗೀತಾ ಪುನರ್ಮನನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಎಲ್ಲರೂ ನಮ್ಮ ಮುಂದಿನ ಪೀಳಿಗೆ ಉತ್ತಮವಾಗಿರಬೇಕು, ಮಕ್ಕಳಿಗೆ ಭವ್ಯ ಭವಿಷ್ಯವನ್ನು ಕಲ್ಪಿಸಬೇಕು ಎಂದು ಬಯಸುತ್ತಾರೆ. ಆದರೆ, ತಾವೇ ಸಾಮಾಜಿಕ, ನೈತಿಕ, ರಾಷ್ಟ್ರೀಯ ಮೌಲ್ಯಗಳನ್ನು ಮರೆತಿರುತ್ತಾರೆ. ಇದರಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯವಿಲ್ಲ’ ಎಂದು ಹೇಳಿದರು.