ಹಾಸನ: ‘ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿಯ ಆಡಳಿತ ಮಂಡಳಿಯಲ್ಲಿರುವ ಕೆಲವರು ಅಧಿಕಾರ ಲಾಲಸೆಯಿಂದ ಸಂಸ್ಥೆಯ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ’ ಎಂದು ಮಂಡಳಿಯ ನಿರ್ದೇಶಕರಲ್ಲೊಬ್ಬರಾದ ಬಿ.ಆರ್. ಗುರುದೇವ್ ಆರೋಪಿಸಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ‘ಅಶೋಕ ಹಾರನಹಳ್ಳಿ ಸಮಿತಿಯ ಆಯ್ಕೆಯಾದ ಅಧ್ಯಕ್ಷರೇ ವಿನಾ ನಾಮನಿರ್ದೇಶಿತ ಅಧ್ಯಕ್ಷರಲ್ಲ. ಸಂಸ್ಥೆಯ ಅಧ್ಯಕ್ಷರಾಗಿ ಮುಂದುವರಿಯುವ ಹಕ್ಕು ಅವರಿಗೆ ಇದೆ. ಹಿರಿಯ ಮುಖಂಡ ಬಿ.ಬಿ. ಶಿವಪ್ಪ ನೇತೃತ್ವದಲ್ಲಿ ಈಚೆಗೆ 13 ಮಂದಿ ನಿರ್ದೇಶಕರು ಸಭೆ ನಡೆಸಿದ್ದು ನಿಜ.