ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯುವ ಶಕ್ತಿ ದೇಶದ ಅಭಿವೃದ್ಧಿಗೆ ಪೂರಕವಾಗಲಿ’

Last Updated 25 ಸೆಪ್ಟೆಂಬರ್ 2013, 6:49 IST
ಅಕ್ಷರ ಗಾತ್ರ

ಯಾದಗಿರಿ: ಯುವ ಶಕ್ತಿ ಅದಮ್ಯವಾದ ಚೈತನ್ಯವನ್ನು ಹೊಂದಿದ್ದು, ಅದು ದೇಶದ ಅಭಿವೃದ್ಧಿಗೆ ಪೂರಕವಾದಲ್ಲಿ ಸಾರ್ಥಕವಾಗುತ್ತದೆ ಎಂದು ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಸುಭಾಷಚಂದ್ರ ಕೌಲಗಿ ಹೇಳಿದರು.

ಮಂಗಳವಾರ ಇಲ್ಲಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಎನ್.ಎಸ್.ಎಸ್. ಸಂಸ್ಥಾಪನಾ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಶ್ರಮದಾನ ಕಾರ್ಯ­ಕ್ರಮ­ದಲ್ಲಿ ಅವರು ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಯು ಶ್ರಮ ಸಂಸ್ಕೃತಿಯನ್ನು ರೂಢಿಸಿಕೊಳ್ಳಬೇಕು. ಸೇವಾ ಮನೋಭಾವನೆಯಿಂದ ಕೈಗೊ­ಳ್ಳುವ ದುಡಿಮೆ ದೇಶದ ಒಳಿತಿಗಾಗಿ ಸಲ್ಲುತ್ತದೆ.  ವಿದ್ಯಾರ್ಥಿಗಳು ನಿಷ್ಠೆ­ಯಿಂದ ದುಡಿಯುವುದನ್ನು ಕಲಿತು­ಕೊಳ್ಳಬೇಕು ಎಂದು ಸಲಹೆ ನೀಡಿದರು.

ಎನ್.ಎಸ್.ಎಸ್. ಸಾಗಿ ಬಂದ ದಾರಿಯನ್ನು ವಿವರಿಸಿದ ಅವರು, ವಿದ್ಯಾರ್ಥಿಗಳಲ್ಲಿ ಜಾತಿ, ಮತ, ಪಂಥ, ಪಂಗಡಗಳ ಬೇಧ ಭಾವ ದೂರ ಮಾಡಿ ಎಲ್ಲರೂ ಒಂದೇ ಎಂಬ ಭಾವ ಮೂಡ­ಬೇಕು. ಸಮಾಜದಲ್ಲಿ ಉತ್ತಮ ನಾಗ­ರಿಕನಾಗಿ ರೂಪುಗೊಳ್ಳಲು ಎನ್.ಎಸ್.­ಎಸ್. ಸೂಕ್ತ ವೇದಿಕೆಯಾಗಿದ್ದು, ಅದನ್ನು ಸಮರ್ಥವಾಗಿ ಬಳಸಿಕೊಳ್ಳ­ಬೇಕು ಎಂದು ಹೇಳಿದರು.

ಎನ್ಎಸ್ಎಸ್ ಅಧಿಕಾರಿ ಮೋನ­ಯ್ಯ ಕಲಾಲ, ಮಲ್ಲಾರೆಡ್ಡಿ ಪಾಟೀಲ, ಅಶೋಕ ವಾಟ್ಕರ, ಶರಣಬಸ್ಸಪ್ಪ ರಾಯಕೋಟಿ, ಡಾ. ಜಗನ್ನಾಥ ಪಟ್ಟಣಕರ, ಆಂಜನೇಯ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು. ನಂತರ ಎನ್‌ಎಸ್‌ಎಸ್‌ ಸ್ವಯಂ ಸೇವಕರು ವಿಶೇಷ ಶ್ರಮದಾನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT