ಬೆಂಗಳೂರು: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ತನಗೆ ದೊರೆತಿರುವ ಅವಕಾಶವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ದೂರಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿ.ಎಸ್.ಯಡಿಯೂರಪ್ಪ ನಡೆಸಿದ ಭ್ರಷ್ಟಾಚಾರದಿಂದ ಬೇಸತ್ತ ಜನತೆ ಕಾಂಗ್ರೆಸ್ಗೆ ಅಧಿಕಾರ ನೀಡಿದರು. ಆದರೆ ಅದನ್ನು ಕಾಂಗ್ರೆಸ್ ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ಡಿ.ಕೆ.ಶಿವಕುಮಾರ್ ಮತ್ತು ಆರ್.ರೋಷನ್ ಬೇಗ್ ಅವರನ್ನು ಸಂಪುಟಕ್ಕೆ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಅವರು, ಯುವಜನತೆ ಇದರ ವಿರುದ್ಧ ಸಿಡಿದೇಳಬೇಕು ಎಂದು ಕರೆ ನೀಡಿದರು.
ಸಂತೋಷ್ ಲಾಡ್ ವಿರುದ್ಧದ ಆರೋಪಗಳು ಪದೇ ಪದೇ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಕೈಬಿಡಲಾಯಿತು. ಈಗ ಅದೇ ರೀತಿ ಆರೋಪ ಇರುವ ಇಬ್ಬರನ್ನು ಸಂಪುಟಕ್ಕೆ ತೆಗೆದುಕೊಂಡಿರುವುದು ಸರಿಯಲ್ಲ ಎಂದರು. ಈ ರೀತಿಯ ಅನ್ಯಾಯಗಳನ್ನು ಜನ ಸಹಿಸಿಕೊಳ್ಳಬಾರದು. ಅಂಚೆ ಕಾರ್ಡ್ಗಳು, ಮಾಧ್ಯಮಗಳ ಮೂಲಕ ವಿರೋಧವನ್ನು ಸೂಚಿಸಬೇಕು ಎಂದರು.