ಯಲಹಂಕ:‘ಕೇವಲ ಸಂಬಳ ಗಳಿಸುವ ಉದ್ದೇಶದಿಂದ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳದೆ, ದೇಶದ ಭವಿಷ್ಯದ ಉತ್ತಮ ಪೀಳಿಗೆಯನ್ನು ರೂಪಿಸುವ ಮಹತ್ತರವಾದ ಜವಾಬ್ದಾರಿ ಶಿಕ್ಷಕರ ಮೇಲಿದೆ. ಈ ಕಾರ್ಯವನ್ನು ಯಶಸ್ವಿಯಾಗಿ ನಿಭಾಯಿಸಬೇಕು’ ಎಂದು ಬಸವ ಬಳಗದ ಅಧ್ಯಕ್ಷ ಡಾ.ಕೆ.ಪಿ.ಗುರುಸ್ವಾಮಿ ಹೇಳಿದರು.
ಸಹಕಾರನಗರದ ಕಾವೇರಿ ಬಿ.ಎಡ್.ಕಾಲೇಜಿನಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಜನರು ಇಷ್ಟಪಡುವ ಮತ್ತು ಅನುಕರಣೆ ಮಾಡುವ ರೀತಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹು ಮಾನ ವಿತರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಶ್ ಇ.ಬಿ, ಉಪನ್ಯಾಸಕರಾದ ಎಸ್.ಆರ್. ಬಿಂದುಕುಮಾರ್, ಸಿ.ಎಸ್.ಗುಂಡಪ್ಪ ಉಪಸ್ಥಿತರಿದ್ದರು.