ಸಿರುಗುಪ್ಪ: ‘ಗ್ರಾಮೀಣ ಪ್ರದೇಶ ಅಭಿವೃದ್ಧಿಗಾಗಿ ಪಂಚಾಯತ್ ರಾಜ್ ಇಲಾಖೆ ಜಾರಿಗೊಳಿಸಿರುವ 15 ವಿವಿಧ ಯೋಜನೆಗಳ ಅನುಷ್ಠಾನ ನಿರೀಕ್ಷಿತ ಮಟ್ಟದಲ್ಲಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಎಚ್.ಕೆ.ಪಾಟೀಲ ಭಾನುವಾರ ಇಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಖಾಸಗಿ ಕಾರ್ಯಕ್ರಮಕ್ಕೆ ಇಲ್ಲಿಗೆ ಬಂದಿದ್ದ ಅವರು, ‘ರಾಜ್ಯದ ಬಹುತೇಕ ತಾಲ್ಲೂಕು ಪಂಚಾಯ್ತಿಗಳು ಗ್ರಾಮೀಣ ಭಾಗದಲ್ಲಿ ಶೌಚಾಲಯ ನಿರ್ಮಾಣಕ್ಕೆ ಮುತುವರ್ಜಿ ವಹಿಸಿಲ್ಲ. ಈ ಮಹತ್ವದ ಯೋಜನೆ ಬಗ್ಗೆ ನಿರ್ಲಕ್ಷ್ಯ ತೋರಿವೆ’ ಎಂದು ಬೇಸರ ವ್ಯಕ್ತಪಡಿಸಿದರು.
ಹಳ್ಳಿಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಸ್ಥಳದ ಕೊರತೆ ಅಥವಾ ಇನ್ನಿತರ ನೆಪ ಒಡ್ಡಿದ ಪರಿಣಾಮ ನಿರೀಕ್ಷಿತ ಮಟ್ಟದ ಗುರಿ ತಲುಪಲು ಆಗಿಲ್ಲ ಎಂದು ಹೇಳಿದರು.