ನವದೆಹಲಿ(ಪಿಟಿಐ): ಪ್ರಸಕ್ತ ಹಣಕಾಸು ವರ್ಷದಲ್ಲಿ ₨20 ಸಾವಿರ ಕೋಟಿ ರಫ್ತು ವಹಿವಾಟು ಗುರಿ ತಲುಪಲು ತಯಾರಿಕಾ ವಲಯಕ್ಕೆ ಗರಿಷ್ಠ ಉತ್ತೇಜನ ನೀಡುವ ಅಗತ್ಯ ಇದೆ ಎಂದು ಕೇಂದ್ರ ಕೈಗಾರಿಕಾ ಸಚಿವ ಆನಂದ ಶರ್ಮಾ ಹೇಳಿದ್ದಾರೆ. ಒಟ್ಟಾರೆ ರಫ್ತು ವಹಿವಾಟಿನಲ್ಲಿ ತಯಾರಿಕಾ ವಲಯದ ಪಾಲು ಶೇ 75ರಷ್ಟಿದೆ. ಆದರೆ, ಇತ್ತೀಚಿನ ತಿಂಗಳುಗ ಳಲ್ಲಿ ತಯಾರಿಕಾ ವಲಯದ ಪ್ರಗತಿ ಗಣನೀಯವಾಗಿ ಕುಸಿದಿದೆ.