ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಜ್ಞಾನ ಬೆಳೆದಂತೆ ಧಾರ್ಮಿಕ ಪ್ರಜ್ಞೆ ಕಣ್ಮರೆ’

Last Updated 24 ಸೆಪ್ಟೆಂಬರ್ 2013, 6:23 IST
ಅಕ್ಷರ ಗಾತ್ರ

ಅರಸೀಕೆರೆ: ವೈಜ್ಞಾನಿಕ ಯುಗದಲ್ಲಿ ಮನುಷ್ಯ ಬಹಳಷ್ಟು ಪ್ರಗತಿ ಸಾಧಿಸಿದ್ದಾನೆ. ವಿಜ್ಞಾನ ಬೆಳೆದಂತೆ ಮನುಷ್ಯನಲ್ಲಿ ಧಾರ್ಮಿಕ ಪ್ರಜ್ಞೆ ಹಾಗೂ ಸ್ವಾಭಿಮಾನ ಕಡಿಮೆಯಾಗುತ್ತಿವೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಪಟ್ಟಣದ ಗಣಪತಿ ಆಸ್ಥಾನ ಮಂಟಪದಲ್ಲಿ ಆಯೋಜಿಸಿದ್ದ 72ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಧರ್ಮ ಹಾಗೂ ಜನ ಜಾಗೃತಿ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಮೌಲ್ಯಗಳು ಬೆಳೆದು ಬಂದಾಗ ಮಾತ್ರ ಆರೋಗ್ಯ ಪೂರ್ಣ ಸಮಾಜ ನಿರ್ಮಾಣಗೊಳ್ಳಲು ಸಾಧ್ಯ ಎಂದರು.

ಆದರ್ಶ ಸಮಾಜ ನಿರ್ಮಾರ್ಣಕ್ಕೆ ಧರ್ಮದ ನೀತಿ ಸಂಹಿತೆ ಅತ್ಯಂತ ಆಗತ್ಯ. ನೀತಿ ಧರ್ಮಗಳು ನಮ್ಮನ್ನು ಬಂಧಿಸುವುದಿಲ್ಲ. ವೈಚಾರಿಕತೆಯ ದಬ್ಭಾಳಿಕೆ ಧರ್ಮ ಸಂಸ್ಕೃತಿ ಮತ್ತು ಪರಂಪರೆಗಳ ಬಗೆಗೆ ದುಷ್ಪರಿಣಾಮ ಬೀರುತ್ತಿರುವ ಇಂದಿನ ಸಂದರ್ಭದಲ್ಲಿ ಜಾಗೃತ ಗೊಳ್ಳಬೇಕಿದೆ ಎಂದರು.

ತಿಪಟೂರು ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ , ದೊಡ್ಡಗುಣಿ ಮಠದ  ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಹೊನ್ನವಳ್ಳಿ ಕರಿಸಿದ್ಧೇಶ್ವರ ಮಠದ ಪ್ರಭುಕುಮಾರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ಉದ್ಯಮಿ ಅರುಣ್‌ ಕುಮಾರ್‌, ಪುರಸಭಾ ಮಾಜಿ ಅಧ್ಯಕ್ಷ  ಎನ್‌.ಎಸ್‌. ಸಿದ್ದರಾಮಶೆಟ್ಟಿ, ಗಣಪತಿ ಭಕ್ತ ಮಂಡಲಿ ಅಧ್ಯಕ್ಷ ಎಸ್‌.ಎನ್‌ ಸುಬ್ಬಣ್ಣ, ಶಾಂತವೀರಯ್ಯ, ಸಿ.ರಾಜಣ್ಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT