ಶಾಸಕ ನರೇಂದ್ರಸ್ವಾಮಿ ಅವರು ಆಡಳಿತ ಪಕ್ಷದ ಶಾಸಕರಾಗಿದ್ದು ಈ ಬಗ್ಗೆ ಗಮನ ನೀಡಿ ಪ್ರತ್ಯೇಕ ಸಿಬ್ಬಂದಿ ನೇಮಿಸಲು ಚರ್ಚಿಸುವ ಅಗತ್ಯವಿದೆ ಎಂದು ತಿಳಿಸಿದರು. ಇಂತಹ ಪ್ರಯೋಗವನ್ನು ತಮಿಳುನಾಡು ಸರ್ಕಾರ ಮಾಡಲು ಮುಂದಾಗಿದೆ ಎಂದೂ ಮಾಹಿತಿ ನೀಡಿದರು.
ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಕರಲ್ಲೂ ಕೆಲವು ಲೋಪಗಳು ಇವೆ. ಆದರೆ ಅದನ್ನು ದೊಡ್ಡದು ಮಾಡಿ ವೃತ್ತಿಗೆ ಅಗೌರವ ತರಬಾರದು ಎಂದು ಕಿವಿ ಮಾತು ಹೇಳಿದರು. ಕಳೆದ ಸಾಲಿನಲ್ಲಿ ನಿವೃತ್ತಿ ಹೊಂದಿದ 41 ಶಿಕ್ಷಕರು, ಮೂವರು ಅಕಾಲಿಕ ಮರಣವನ್ನಪ್ಪಿದ್ದ ಶಿಕ್ಷಕರ ಸಂಬಂಧಿಕರು, ಕಳೆದ ಸಾಲಿನಲ್ಲಿ ಹತ್ತನೆ ತರಗತಿಯಲ್ಲಿ ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳ ಮುಖ್ಯಶಿಕ್ಷಕರು, ಹತ್ತನೆ ತರಗತಿಯಲ್ಲಿ ಹೆಚ್ಚು ಅಂಕಗಳಿಸಿದ ಶಿಕ್ಷಕರ ಮಕ್ಕಳನ್ನು ಸನ್ಮಾನಿಸಲಾಯಿತು. ಜಗನ್ನಾಥ್, ನಿತೀನ್ ಸಾಗರ್ ಟ್ರಸ್ಟ್ ವತಿಯಿಂದ ಐದು ಮಂದಿ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಎಸ್. ಪ್ರಕಾಶ್, ಎಚ್. ಬಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಂದ್ರ ಇದ್ದರು.