<p>ಹಿಂದೂ ಸಂಪ್ರದಾಯದ ಪ್ರಕಾರ ಸಂಜೆ ಸಮಯದಲ್ಲಿ ನಿದ್ದೆ ಮಾಡುವುದು ಸೂಕ್ತವಲ್ಲ. ಸಂಜೆ ಸಮಯದಲ್ಲಿ ಲಕ್ಷ್ಮೀ ದೇವಿ ಮನೆಗೆ ಆಗಮಿಸುತ್ತಾಳೆ ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಈ ಸಮಯದಲ್ಲಿ ನಿದ್ದೆ ಮಾಡಬಾರದು ಎಂಬ ನಂಬಿಕೆ ಇದೆ. ಈ ಪದ್ಧತಿ ಇಂದಿಗೂ ಚಾಲ್ತಿಯಲ್ಲಿದೆ. ಈ ಪದ್ದತಿಯ ಹಿಂದಿನ ಮಹತ್ವವೇನು ಎಂಬುದನ್ನು ನೋಡೋಣ. </p>.ಹಗಲಿನಲ್ಲಿ ನಿದ್ದೆ ಮಾಡುವುದರಿಂದ ಏನಾಗುತ್ತೆ? ಇಲ್ಲಿದೆ ಮಾಹಿತಿ.ನಿದ್ದೆ, ಊಟಕ್ಕಾಗಿ ಭಾರತೀಯರ ಸಮಯ ಮೀಸಲು ಭಾರಿ ಇಳಿಕೆ!. <ul><li><p>ಹಿಂದೂ ಸಾಂಪ್ರದಾಯದ ಪ್ರಕಾರ ಮುಸ್ಸಂಜೆ ದೀಪ ಹಚ್ಚಲು ಅತ್ಯಂತ ಪವಿತ್ರ ಸಮಯವಾಗಿದೆ. ಈ ವೇಳೆ ದೇವತೆಗಳು ಭೂಮಿಗೆ ಭೇಟಿ ನೀಡಿ ಮನೆಯ ಸದಸ್ಯರಿಗೆ ಆಶೀರ್ವಾದ ಮಾಡುತ್ತಾರೆ. ಆದ್ದರಿಂದ ಈ ಸಮಯದಲ್ಲಿ ನಿದ್ದೆ ಮಾಡುವುದು ಸೂಕ್ತವಲ್ಲವೆಂದು ಹೇಳಲಾಗುತ್ತದೆ.</p></li><li><p>ಸಂಜೆಯ ಸಮಯದಲ್ಲಿ ದುರ್ಗಾ, ಲಕ್ಷ್ಮೀ ಹಾಗೂ ಸರಸ್ವತಿ ಮನೆಯೊಳಗೆ ಪ್ರವೇಶಿಸಿ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ. ಈ ಸಮಯದಲ್ಲಿ ಮಕ್ಕಳು ಓದಿನತ್ತ ಗಮನ ಹರಿಸಬೇಕು. ಹಿರಿಯರು ಮಂತ್ರ ಪಠಿಸುವುದು ಭಕ್ತಿ ಗೀತೆಗಳನ್ನು ಕೇಳುವುದು ಹಾಗೂ ದೇವರ ಪೂಜೆ ಮಾಡುವುದರಿಂದ ದೇವತೆಗಳ ಆಶೀರ್ವಾದ ಲಭಿಸಿ ಸಕಲ ಸಮೃದ್ಧಿ ದೊರೆಯುತ್ತದೆ ಎಂಬ ನಂಬಿಕೆ ಇದೆ.</p></li><li><p>ಸಂಜೆ ವೇಳೆ ಮಲಗುವುದರಿಂದ ದಾರಿದ್ರ್ಯ ಬರುತ್ತದೆ ಎಂಬ ನಂಬಿಕೆ ಇದೆ. </p></li><li><p>ಸಂಜೆ ವೇಳೆ ಮಲಗುವುದರಿಂದ ಜೀರ್ಣಾಂಗ ವ್ಯವಸ್ಥೆ ನಿಧಾನಗೊಂಡು ಅಜೀರ್ಣ ಸಮಸ್ಯೆಗಳು ಉಂಟಾಗಬಹುದು. ಇದರಿಂದ ರಾತ್ರಿಯ ನಿದ್ರಾಹೀನತೆ ಉಂಟಾಗಬಹುದು.</p></li><li><p>ಸಂಜೆ ವೇಳೆ ದೈಹಿಕ ಚಟುವಟಿ ಅಥವಾ ಕುಟುಂಬ, ಸ್ನೇಹಿತರೊಂದಿಗೆ ಮಾತನಾಡಿ ಸಮಯ ಕಳೆಯುವುದು ಉತ್ತಮ ಎಂದು ಹೇಳಲಾಗುತ್ತದೆ.</p></li><li><p>ಆಲಸ್ಯ ವ್ಯಕ್ತಿಯನ್ನು ಸೋಮಾರಿಯನ್ನಾಗಿಸುತ್ತದೆ. ಸಂಜೆ ಮಲಗುವುದರಿಂದ ಆಲಸ್ಯ ಮತ್ತು ತಾಮಸಿಕ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. </p></li></ul><p>ಆದ್ದರಿಂದ ಹಿರಿಯರು ಸಂಜೆ ಸಮಯದಲ್ಲಿ ಮನೆಯೊಳಗೆ ಮಲಗಬಾರದು ಎಂದು ಹೇಳುತ್ತಾರೆ. ಅಲ್ಲದೇ ಶಾಸ್ತ್ರಗಳೂ ಇದನ್ನೇ ಹೇಳುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿಂದೂ ಸಂಪ್ರದಾಯದ ಪ್ರಕಾರ ಸಂಜೆ ಸಮಯದಲ್ಲಿ ನಿದ್ದೆ ಮಾಡುವುದು ಸೂಕ್ತವಲ್ಲ. ಸಂಜೆ ಸಮಯದಲ್ಲಿ ಲಕ್ಷ್ಮೀ ದೇವಿ ಮನೆಗೆ ಆಗಮಿಸುತ್ತಾಳೆ ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಈ ಸಮಯದಲ್ಲಿ ನಿದ್ದೆ ಮಾಡಬಾರದು ಎಂಬ ನಂಬಿಕೆ ಇದೆ. ಈ ಪದ್ಧತಿ ಇಂದಿಗೂ ಚಾಲ್ತಿಯಲ್ಲಿದೆ. ಈ ಪದ್ದತಿಯ ಹಿಂದಿನ ಮಹತ್ವವೇನು ಎಂಬುದನ್ನು ನೋಡೋಣ. </p>.ಹಗಲಿನಲ್ಲಿ ನಿದ್ದೆ ಮಾಡುವುದರಿಂದ ಏನಾಗುತ್ತೆ? ಇಲ್ಲಿದೆ ಮಾಹಿತಿ.ನಿದ್ದೆ, ಊಟಕ್ಕಾಗಿ ಭಾರತೀಯರ ಸಮಯ ಮೀಸಲು ಭಾರಿ ಇಳಿಕೆ!. <ul><li><p>ಹಿಂದೂ ಸಾಂಪ್ರದಾಯದ ಪ್ರಕಾರ ಮುಸ್ಸಂಜೆ ದೀಪ ಹಚ್ಚಲು ಅತ್ಯಂತ ಪವಿತ್ರ ಸಮಯವಾಗಿದೆ. ಈ ವೇಳೆ ದೇವತೆಗಳು ಭೂಮಿಗೆ ಭೇಟಿ ನೀಡಿ ಮನೆಯ ಸದಸ್ಯರಿಗೆ ಆಶೀರ್ವಾದ ಮಾಡುತ್ತಾರೆ. ಆದ್ದರಿಂದ ಈ ಸಮಯದಲ್ಲಿ ನಿದ್ದೆ ಮಾಡುವುದು ಸೂಕ್ತವಲ್ಲವೆಂದು ಹೇಳಲಾಗುತ್ತದೆ.</p></li><li><p>ಸಂಜೆಯ ಸಮಯದಲ್ಲಿ ದುರ್ಗಾ, ಲಕ್ಷ್ಮೀ ಹಾಗೂ ಸರಸ್ವತಿ ಮನೆಯೊಳಗೆ ಪ್ರವೇಶಿಸಿ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ. ಈ ಸಮಯದಲ್ಲಿ ಮಕ್ಕಳು ಓದಿನತ್ತ ಗಮನ ಹರಿಸಬೇಕು. ಹಿರಿಯರು ಮಂತ್ರ ಪಠಿಸುವುದು ಭಕ್ತಿ ಗೀತೆಗಳನ್ನು ಕೇಳುವುದು ಹಾಗೂ ದೇವರ ಪೂಜೆ ಮಾಡುವುದರಿಂದ ದೇವತೆಗಳ ಆಶೀರ್ವಾದ ಲಭಿಸಿ ಸಕಲ ಸಮೃದ್ಧಿ ದೊರೆಯುತ್ತದೆ ಎಂಬ ನಂಬಿಕೆ ಇದೆ.</p></li><li><p>ಸಂಜೆ ವೇಳೆ ಮಲಗುವುದರಿಂದ ದಾರಿದ್ರ್ಯ ಬರುತ್ತದೆ ಎಂಬ ನಂಬಿಕೆ ಇದೆ. </p></li><li><p>ಸಂಜೆ ವೇಳೆ ಮಲಗುವುದರಿಂದ ಜೀರ್ಣಾಂಗ ವ್ಯವಸ್ಥೆ ನಿಧಾನಗೊಂಡು ಅಜೀರ್ಣ ಸಮಸ್ಯೆಗಳು ಉಂಟಾಗಬಹುದು. ಇದರಿಂದ ರಾತ್ರಿಯ ನಿದ್ರಾಹೀನತೆ ಉಂಟಾಗಬಹುದು.</p></li><li><p>ಸಂಜೆ ವೇಳೆ ದೈಹಿಕ ಚಟುವಟಿ ಅಥವಾ ಕುಟುಂಬ, ಸ್ನೇಹಿತರೊಂದಿಗೆ ಮಾತನಾಡಿ ಸಮಯ ಕಳೆಯುವುದು ಉತ್ತಮ ಎಂದು ಹೇಳಲಾಗುತ್ತದೆ.</p></li><li><p>ಆಲಸ್ಯ ವ್ಯಕ್ತಿಯನ್ನು ಸೋಮಾರಿಯನ್ನಾಗಿಸುತ್ತದೆ. ಸಂಜೆ ಮಲಗುವುದರಿಂದ ಆಲಸ್ಯ ಮತ್ತು ತಾಮಸಿಕ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. </p></li></ul><p>ಆದ್ದರಿಂದ ಹಿರಿಯರು ಸಂಜೆ ಸಮಯದಲ್ಲಿ ಮನೆಯೊಳಗೆ ಮಲಗಬಾರದು ಎಂದು ಹೇಳುತ್ತಾರೆ. ಅಲ್ಲದೇ ಶಾಸ್ತ್ರಗಳೂ ಇದನ್ನೇ ಹೇಳುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>