<p>ಜ್ಯೋತಿಷದ ಪ್ರಕಾರ, ಇಂದು (ಡಿಸೆಂಬರ್ 12) ಶುಕ್ರನು ಉತ್ತರಾಷಾಢ ನಕ್ಷತ್ರದ ಎರಡನೇ ಪಾದದಲ್ಲಿ ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ. ಶುಕ್ರನ ಪ್ರವೇಶದಿಂದ ಕೆಲವು ರಾಶಿಗಳಿಗೆ ಸುವರ್ಣಕಾಲದ ಆರಂಭವೆಂದು ಹೇಳಬಹುದು.</p><p>ಶುಕ್ರ ಮತ್ತು ಶನಿಯ ಸ್ನೇಹ ಸಂಬಂಧದಿಂದ 12 ರಾಶಿಗಳ ಮೇಲೆ ಪ್ರಭಾವ ಬೀರುತ್ತದೆ. ಆದರೆ ಕೆಲವೇ ಕೆಲವು ರಾಶಿಗಳಿಗೆ ಮಾತ್ರ ಅದೃಷ್ಟ ಒಲಿಯುವ ಸಂಭವ ಹೆಚ್ಚು ಎಂದು ಜ್ಯೋತಿಷದಲ್ಲಿ ಹೇಳಲಾಗುತ್ತದೆ. </p>.ಜ್ಯೋತಿಷ | ತಾಂಬೂಲಕ್ಕೆ ಮಾತ್ರವಲ್ಲ, ಪೂಜೆಗೂ ಬೇಕು ವೀಳ್ಯದೆಲೆ: ಯಾಕೆ ಗೊತ್ತಾ?.ಶಿವನಿಗೆ ತುಳಸಿ, ಬಿಲ್ವಪತ್ರೆ ಅರ್ಪಿಸುವುದರಿಂದ ಆಗುವ ಲಾಭಗಳೇನು? ಇಲ್ಲಿದೆ ಮಾಹಿತಿ.<p><strong>ಮೇಷ ರಾಶಿ:</strong></p><p>ಈ ರಾಶಿಯವರಿಗೆ ಶುಕ್ರನ ಸಂಚಾರದಿಂದ ಕೆಲಸ ಮತ್ತು ವ್ಯವಹಾರದಲ್ಲಿ ಪ್ರಗತಿ ದೊರೆಯುತ್ತದೆ. ವೃತ್ತಿ ಜೀವನದಲ್ಲಿ ಹೊಸ ಮೈಲುಗಲ್ಲು ತಲುಪಲಿದ್ದಾರೆ. ಉದ್ಯೋಗ ಬದಲಾಯಿಸುವ ಯೋಚನೆ ಇದ್ದವರಿಗೆ ಇದು ಸೂಕ್ತ ಸಮಯವೆಂದು ಹೇಳಲಾಗುತ್ತದೆ. ಆದಾಯದಲ್ಲಿ ಹೆಚ್ಚಳವಾಗುವ ಸಂಭವ ಹೆಚ್ಚು. ಈ ಅವಧಿಯಲ್ಲಿ ಮೇಷ ರಾಶಿಯವರ ವ್ಯವಹಾರಗಳು ಇನ್ನಷ್ಟು ವಿಸ್ತಾರವಾಗುತ್ತದೆ. ಆರ್ಥಿಕ ಲಾಭ ಉಂಟಾಗಲಿದೆ. ಚಲನಚಿತ್ರ, ಕಲೆ, ಸಂಗೀತ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ತೊಡಗಿರುವವರಿಗೆ ಉತ್ತಮ ಅವಕಾಶ ಲಭಿಸಲಿವೆ. </p><p><strong>ವೃಷಭ ರಾಶಿ:</strong></p><p>ಈ ರಾಶಿಗೆ ಶುಕ್ರ ಅಧಿಪತಿಯಾಗಿದ್ದಾನೆ. ಶುಕ್ರ ಅಧಿಪತಿಯಾಗುವುದು ಅದೃಷ್ಟದ ಸಂಕೇತ ಎಂದು ಹೇಳಲಾಗುತ್ತದೆ. ಆದ್ದರಿಂದ ಧನ, ಆಸ್ತಿ, ಅಂತಸ್ತು ದೊರೆಯಲಿದೆ. </p><p><strong>ತುಲಾ ರಾಶಿ:</strong></p><p>ಈ ರಾಶಿಯವರು ಮನೆ, ವಾಹನ ಖರೀದಿ ಹಾಗೂ ಆಸ್ತಿಗೆ ಸಂಬಂಧಪಟ್ಟ ವ್ಯವಹಾರಗಳಲ್ಲಿ ಒಳಿತಾಗಲಿದೆ. ತಾಯಿಯೊಂದಿಗಿನ ಸಂಬಂಧ ಬಲಗೊಳ್ಳಲಿದೆ. ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ. ಆತ್ಮವಿಶ್ವಾಸ ದೃಢವಾಗುತ್ತದೆ ಎಂದು ಹೇಳಲಾಗುತ್ತದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜ್ಯೋತಿಷದ ಪ್ರಕಾರ, ಇಂದು (ಡಿಸೆಂಬರ್ 12) ಶುಕ್ರನು ಉತ್ತರಾಷಾಢ ನಕ್ಷತ್ರದ ಎರಡನೇ ಪಾದದಲ್ಲಿ ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ. ಶುಕ್ರನ ಪ್ರವೇಶದಿಂದ ಕೆಲವು ರಾಶಿಗಳಿಗೆ ಸುವರ್ಣಕಾಲದ ಆರಂಭವೆಂದು ಹೇಳಬಹುದು.</p><p>ಶುಕ್ರ ಮತ್ತು ಶನಿಯ ಸ್ನೇಹ ಸಂಬಂಧದಿಂದ 12 ರಾಶಿಗಳ ಮೇಲೆ ಪ್ರಭಾವ ಬೀರುತ್ತದೆ. ಆದರೆ ಕೆಲವೇ ಕೆಲವು ರಾಶಿಗಳಿಗೆ ಮಾತ್ರ ಅದೃಷ್ಟ ಒಲಿಯುವ ಸಂಭವ ಹೆಚ್ಚು ಎಂದು ಜ್ಯೋತಿಷದಲ್ಲಿ ಹೇಳಲಾಗುತ್ತದೆ. </p>.ಜ್ಯೋತಿಷ | ತಾಂಬೂಲಕ್ಕೆ ಮಾತ್ರವಲ್ಲ, ಪೂಜೆಗೂ ಬೇಕು ವೀಳ್ಯದೆಲೆ: ಯಾಕೆ ಗೊತ್ತಾ?.ಶಿವನಿಗೆ ತುಳಸಿ, ಬಿಲ್ವಪತ್ರೆ ಅರ್ಪಿಸುವುದರಿಂದ ಆಗುವ ಲಾಭಗಳೇನು? ಇಲ್ಲಿದೆ ಮಾಹಿತಿ.<p><strong>ಮೇಷ ರಾಶಿ:</strong></p><p>ಈ ರಾಶಿಯವರಿಗೆ ಶುಕ್ರನ ಸಂಚಾರದಿಂದ ಕೆಲಸ ಮತ್ತು ವ್ಯವಹಾರದಲ್ಲಿ ಪ್ರಗತಿ ದೊರೆಯುತ್ತದೆ. ವೃತ್ತಿ ಜೀವನದಲ್ಲಿ ಹೊಸ ಮೈಲುಗಲ್ಲು ತಲುಪಲಿದ್ದಾರೆ. ಉದ್ಯೋಗ ಬದಲಾಯಿಸುವ ಯೋಚನೆ ಇದ್ದವರಿಗೆ ಇದು ಸೂಕ್ತ ಸಮಯವೆಂದು ಹೇಳಲಾಗುತ್ತದೆ. ಆದಾಯದಲ್ಲಿ ಹೆಚ್ಚಳವಾಗುವ ಸಂಭವ ಹೆಚ್ಚು. ಈ ಅವಧಿಯಲ್ಲಿ ಮೇಷ ರಾಶಿಯವರ ವ್ಯವಹಾರಗಳು ಇನ್ನಷ್ಟು ವಿಸ್ತಾರವಾಗುತ್ತದೆ. ಆರ್ಥಿಕ ಲಾಭ ಉಂಟಾಗಲಿದೆ. ಚಲನಚಿತ್ರ, ಕಲೆ, ಸಂಗೀತ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ತೊಡಗಿರುವವರಿಗೆ ಉತ್ತಮ ಅವಕಾಶ ಲಭಿಸಲಿವೆ. </p><p><strong>ವೃಷಭ ರಾಶಿ:</strong></p><p>ಈ ರಾಶಿಗೆ ಶುಕ್ರ ಅಧಿಪತಿಯಾಗಿದ್ದಾನೆ. ಶುಕ್ರ ಅಧಿಪತಿಯಾಗುವುದು ಅದೃಷ್ಟದ ಸಂಕೇತ ಎಂದು ಹೇಳಲಾಗುತ್ತದೆ. ಆದ್ದರಿಂದ ಧನ, ಆಸ್ತಿ, ಅಂತಸ್ತು ದೊರೆಯಲಿದೆ. </p><p><strong>ತುಲಾ ರಾಶಿ:</strong></p><p>ಈ ರಾಶಿಯವರು ಮನೆ, ವಾಹನ ಖರೀದಿ ಹಾಗೂ ಆಸ್ತಿಗೆ ಸಂಬಂಧಪಟ್ಟ ವ್ಯವಹಾರಗಳಲ್ಲಿ ಒಳಿತಾಗಲಿದೆ. ತಾಯಿಯೊಂದಿಗಿನ ಸಂಬಂಧ ಬಲಗೊಳ್ಳಲಿದೆ. ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ. ಆತ್ಮವಿಶ್ವಾಸ ದೃಢವಾಗುತ್ತದೆ ಎಂದು ಹೇಳಲಾಗುತ್ತದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>