<p>ಫೆಬ್ರುವರಿ 13ರ ಶುಕ್ರವಾರದಂದು ಸರ್ವ ಏಕಾದಶಿ ಅಥವಾ ವಿಜಯ ಏಕದಾಶಿಯನ್ನು ಆಚರಣೆ ಮಾಡಲಾಗುತ್ತದೆ. ವಿಷ್ಣು ಅಥವಾ ನಾರಾಯಣನ ಭಕ್ತರು ಈ ಏಕಾದಶಿಯ ದಿನ ಉಪವಾಸ ವ್ರತವನ್ನು ಕೈಗೊಳ್ಳುತ್ತಾರೆ. ನಾರಾಯಣನ ಸ್ತೋತ್ರಗಳನ್ನು ಪಠಿಸುತ್ತಾರೆ. </p><p><strong>ಏಕಾದಶಿ ಎಂದರೇನು?</strong> </p><p>ಹಿಂದೂ ಮತ್ತು ಜೈನ ಧರ್ಮದಲ್ಲಿ ಏಕಾದಶಿಯನ್ನು ಮಂಗಳಕರ ದಿನವೆಂದು ಪರಿಗಣಿಸಲಾಗಿದೆ. ತಿಂಗಳಿಗೆ ಎರಡು ಬಾರಿ ಏಕಾದಶಿಯನ್ನು ಆಚರಣೆ ಮಾಡಲಾಗುತ್ತದೆ. ಚಂದ್ರನ ಚಲನೆಗೆ ಅನುಗುಣವಾಗಿ ಏಕಾದಶಿಯು ಕೃಷ್ಣ ಮತ್ತು ಶುಕ್ಲ ಪಕ್ಷದಲ್ಲಿ ಬರುತ್ತದೆ.</p><p>ಆಧ್ಯಾತ್ಮಿಕವಾಗಿ, ಏಕಾದಶಿ ಹನ್ನೊಂದು ಇಂದ್ರಿಯಗಳನ್ನು ಸಂಕೇತಿಸುತ್ತದೆ ಎಂದು ಹೇಳಲಾಗುತ್ತದೆ. ಒಂದು ವರ್ಷದಲ್ಲಿ ವಿಷ್ಣುವಿನ ವಿವಿಧ ಅವತಾರಗಳಿಗೆ ಸಂಬಂಧಿಸಿದ 24 ಏಕಾದಶಿಗಳು ಬರುತ್ತವೆ.</p><p><strong>ಏಕಾದಶಿಯಂದು ಅನ್ನವನ್ನು ಏಕೆ ಸೇವಿಸಬಾರದು?</strong></p><p>ಇದರ ಹಿಂದೆ ವೈಜ್ಞಾನಿಕ ಕಾರಣವಿದೆ. ದಿನ ಪೂರ್ತಿ ಉಪವಾಸವಿರುವುದರಿಂದ ಏಕಾದಶಿಯಂದು ಹೆಚ್ಚು ನೀರನ್ನು ಹಿಡಿದಿಟ್ಟುಕೊಳ್ಳುವ ಆಹಾರವನ್ನು ಸೇವಿಸುವುದು ಅಸ್ವಸ್ಥತೆಗೆ ಕಾರಣವಾಗಬಹುದು. ಅನ್ನದಲ್ಲಿ ತೇವಾಂಶ ಅಧಿಕವಾಗಿರುತ್ತದೆ. ಆದ್ದರಿಂದ ಉಪವಾಸದ ಬಳಿಕ ಅನ್ನ ಸೇವಿಸಬಾರದು ಎನ್ನಲಾಗುತ್ತದೆ.</p><p><strong>ಪೂಜಾ ವಿಧಾನ</strong></p><p>ಈ ದಿನ ಬೆಳಿಗ್ಗೆ ಬೇಗ ಎದ್ದು ಸ್ನಾನ ಮುಗಿಸಿದ ನಂತರ ಸೂರ್ಯನಿಗೆ ಮೊದಲ ಪೂಜೆ ಅರ್ಪಿಸಬೇಕು. ನಂತರ ದೇವರ ಮನೆಯನ್ನು ಸ್ವಚ್ಛಗೊಳಿಸಿ ನಾರಾಯಣನಿಗೆ ಪೂಜೆ ಸಲ್ಲಿಸಿ ಉಪವಾಸವನ್ನು ಆಚರಿಸಬೇಕು. </p><p>ತುಪ್ಪದ ದೀಪ ಹಚ್ಚುವುದರಿಂದ ಮನೆಯಲ್ಲಿ ಸುಖ, ಶಾಂತಿ ಹಾಗೂ ಸಮೃದ್ಧಿ ನೆಲೆಸಲಿದೆ ಎಂದು ಜ್ಯೋತಿಷ ಹೇಳುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಫೆಬ್ರುವರಿ 13ರ ಶುಕ್ರವಾರದಂದು ಸರ್ವ ಏಕಾದಶಿ ಅಥವಾ ವಿಜಯ ಏಕದಾಶಿಯನ್ನು ಆಚರಣೆ ಮಾಡಲಾಗುತ್ತದೆ. ವಿಷ್ಣು ಅಥವಾ ನಾರಾಯಣನ ಭಕ್ತರು ಈ ಏಕಾದಶಿಯ ದಿನ ಉಪವಾಸ ವ್ರತವನ್ನು ಕೈಗೊಳ್ಳುತ್ತಾರೆ. ನಾರಾಯಣನ ಸ್ತೋತ್ರಗಳನ್ನು ಪಠಿಸುತ್ತಾರೆ. </p><p><strong>ಏಕಾದಶಿ ಎಂದರೇನು?</strong> </p><p>ಹಿಂದೂ ಮತ್ತು ಜೈನ ಧರ್ಮದಲ್ಲಿ ಏಕಾದಶಿಯನ್ನು ಮಂಗಳಕರ ದಿನವೆಂದು ಪರಿಗಣಿಸಲಾಗಿದೆ. ತಿಂಗಳಿಗೆ ಎರಡು ಬಾರಿ ಏಕಾದಶಿಯನ್ನು ಆಚರಣೆ ಮಾಡಲಾಗುತ್ತದೆ. ಚಂದ್ರನ ಚಲನೆಗೆ ಅನುಗುಣವಾಗಿ ಏಕಾದಶಿಯು ಕೃಷ್ಣ ಮತ್ತು ಶುಕ್ಲ ಪಕ್ಷದಲ್ಲಿ ಬರುತ್ತದೆ.</p><p>ಆಧ್ಯಾತ್ಮಿಕವಾಗಿ, ಏಕಾದಶಿ ಹನ್ನೊಂದು ಇಂದ್ರಿಯಗಳನ್ನು ಸಂಕೇತಿಸುತ್ತದೆ ಎಂದು ಹೇಳಲಾಗುತ್ತದೆ. ಒಂದು ವರ್ಷದಲ್ಲಿ ವಿಷ್ಣುವಿನ ವಿವಿಧ ಅವತಾರಗಳಿಗೆ ಸಂಬಂಧಿಸಿದ 24 ಏಕಾದಶಿಗಳು ಬರುತ್ತವೆ.</p><p><strong>ಏಕಾದಶಿಯಂದು ಅನ್ನವನ್ನು ಏಕೆ ಸೇವಿಸಬಾರದು?</strong></p><p>ಇದರ ಹಿಂದೆ ವೈಜ್ಞಾನಿಕ ಕಾರಣವಿದೆ. ದಿನ ಪೂರ್ತಿ ಉಪವಾಸವಿರುವುದರಿಂದ ಏಕಾದಶಿಯಂದು ಹೆಚ್ಚು ನೀರನ್ನು ಹಿಡಿದಿಟ್ಟುಕೊಳ್ಳುವ ಆಹಾರವನ್ನು ಸೇವಿಸುವುದು ಅಸ್ವಸ್ಥತೆಗೆ ಕಾರಣವಾಗಬಹುದು. ಅನ್ನದಲ್ಲಿ ತೇವಾಂಶ ಅಧಿಕವಾಗಿರುತ್ತದೆ. ಆದ್ದರಿಂದ ಉಪವಾಸದ ಬಳಿಕ ಅನ್ನ ಸೇವಿಸಬಾರದು ಎನ್ನಲಾಗುತ್ತದೆ.</p><p><strong>ಪೂಜಾ ವಿಧಾನ</strong></p><p>ಈ ದಿನ ಬೆಳಿಗ್ಗೆ ಬೇಗ ಎದ್ದು ಸ್ನಾನ ಮುಗಿಸಿದ ನಂತರ ಸೂರ್ಯನಿಗೆ ಮೊದಲ ಪೂಜೆ ಅರ್ಪಿಸಬೇಕು. ನಂತರ ದೇವರ ಮನೆಯನ್ನು ಸ್ವಚ್ಛಗೊಳಿಸಿ ನಾರಾಯಣನಿಗೆ ಪೂಜೆ ಸಲ್ಲಿಸಿ ಉಪವಾಸವನ್ನು ಆಚರಿಸಬೇಕು. </p><p>ತುಪ್ಪದ ದೀಪ ಹಚ್ಚುವುದರಿಂದ ಮನೆಯಲ್ಲಿ ಸುಖ, ಶಾಂತಿ ಹಾಗೂ ಸಮೃದ್ಧಿ ನೆಲೆಸಲಿದೆ ಎಂದು ಜ್ಯೋತಿಷ ಹೇಳುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>