ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಜಯನಗರದಲ್ಲಿ ನೆಲೆಸಿದ್ದ ದಯಾನಂದ, ಶನಿವಾರ ಜೆಡಿಎಸ್ ಮುಖಂಡ ಎಚ್.ಡಿ.ದೇವೇಗೌಡ ಅವರ ಮನೆ ಬಳಿ ಭದ್ರತೆಗೆ ನಿಯೋಜನೆಗೊಂಡಿದ್ದರು. ಕರ್ತವ್ಯ ಮುಗಿಸಿ ರಾತ್ರಿ 9 ಗಂಟೆಗೆ ಆಡುಗೋಡಿಯ ಸಿಎಆರ್ ಕೇಂದ್ರಕ್ಕೆ ಮರಳಿದ ಅವರು, ಸಮವಸ್ತ್ರ ಬದಲಿಸುವ ಗೋದಾಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.