ತಮ್ಮ ಲೋಕಸಭಾ ಕ್ಷೇತ್ರ ಬಿಹಾರದ ಅರಾದಲ್ಲಿ ಸಂಸದರ ನಿಧಿಯಡಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದ ಪರಿಶೀಲನೆ ವೇಳೆ ಅವರು ಈ ಮಾತು ಹೇಳಿದ್ದಾರೆ. ಅನುಷ್ಠಾನ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲವೆಂದು ಅವರು ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ. ‘ಅಭಿವೃದ್ಧಿ ಕಾರ್ಯಕ್ರಮಗಳಿಂದ ಜನರಿಗೆ ಅನುಕೂಲವಾಗುವಂತಿರಬೇಕು. ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿರಬೇಕು. ಕಾಮಗಾರಿಗಳ ಗುಣಮಟ್ಟ ಉತ್ತಮವಾಗಿರಬೇಕು’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.