ನಿಗಮದ ಕಾರ್ಯಾಚರಣೆ ಹಾಗೂ ನಿರ್ವಹಣೆ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕ ಶಂಕರ್ ನೇತೃತ್ವದಲ್ಲಿ ಬುಧವಾರ ಸಭೆ ಕರೆಯಲಾಗಿದೆ. ಮೆಟ್ರೊ ರೈಲು ಚಾಲಕರು, ನಿಲ್ದಾಣ ನಿಯಂತ್ರಕರು, ಸೆಕ್ಷನ್ ಎಂಜಿನಿಯರ್ಗಳು, ಸಿಗ್ನಲಿಂಗ್, ಟೆಲಿಕಾಂ, ಸ್ವಯಂಚಾಲಿತ ದರ ವಸೂಲಿ (ಎಎಫ್ಸಿ), ಹಳಿಯ ಶಾಶ್ವತ ನಿರ್ವಹಣೆ, ಟ್ರ್ಯಾಕ್ಷನ್, ಸಿವಿಲ್ ಕಾಮಗಾರಿ ವಿಭಾಗಗಳ ಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗಿದೆ.