<p><strong>ವಿಜಯಪುರ:</strong>‘ಸಿದ್ದರಾಮಯ್ಯ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಲು ದೇವೇಗೌಡರು ಬಿಡಲ್ಲ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>‘ಕಾಂಗ್ರೆಸ್ಗೆ ಬಹುಮತವಿಲ್ಲ. ಬದಲಾದ ಕಾಲಘಟ್ಟದಲ್ಲೂ ದೇವೇಗೌಡರು ಕಾಂಗ್ರೆಸ್ಗೆ ಬೆಂಬಲ ನೀಡಲ್ಲ. ಅವರೇನಿದ್ದರೂ ತಮ್ಮ ಕುಟುಂಬದ ಹಿತ ಕಾಯುವವರಷ್ಟೇ’ ಎಂದು ಭಾನುವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.</p>.<p>‘ಮೇ 23ರ ತನಕ ಸರ್ಕಾರದ ಅಸ್ಥಿರ ತಪ್ಪಿಸಲಿಕ್ಕಾಗಿಯೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರೆಸಾರ್ಟ್ಗೆ ಮೊರೆ ಹೋಗಿದ್ದಾರೆ’ ಎಂದು ಲೇವಡಿ ಮಾಡಿದರು.</p>.<p>‘ಉತ್ತರ ಕರ್ನಾಟಕದ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ್ ಹಸ್ತಕ್ಷೇಪ ನಡೆಸುವುದು ಸರಿಯಲ್ಲ. ಇಲ್ಲಿ ನಾವೇ ಸಾಕಷ್ಟು ಮಂದಿ ಇದ್ದೇವೆ. ಮೊದಲು ಈ ಭಾಗದ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಿ’ ಎಂದು ಬಸನಗೌಡ ಹೇಳಿದರು.</p>.<p>‘ಡಿ.ಕೆ.ಶಿವಕುಮಾರ್ ಜಲಸಂಪನ್ಮೂಲ ಸಚಿವರಾದ ಬಳಿಕ ಇಲ್ಲಿನ ಬಹುತೇಕ ನೀರಾವರಿ ಯೋಜನೆಗಳ ಕಾಮಗಾರಿಗಳು ಸ್ಥಗಿತಗೊಂಡಿವೆ. ಕಮಿಷನ್ ಕೇಳುತ್ತಿರುವುದರಿಂದ ಗುತ್ತಿಗೆದಾರರ ಬಿಲ್ಗಳು ಮಂಜೂರಾಗದಾಗಿವೆ’ ಎಂದು ಯತ್ನಾಳ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong>‘ಸಿದ್ದರಾಮಯ್ಯ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಲು ದೇವೇಗೌಡರು ಬಿಡಲ್ಲ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>‘ಕಾಂಗ್ರೆಸ್ಗೆ ಬಹುಮತವಿಲ್ಲ. ಬದಲಾದ ಕಾಲಘಟ್ಟದಲ್ಲೂ ದೇವೇಗೌಡರು ಕಾಂಗ್ರೆಸ್ಗೆ ಬೆಂಬಲ ನೀಡಲ್ಲ. ಅವರೇನಿದ್ದರೂ ತಮ್ಮ ಕುಟುಂಬದ ಹಿತ ಕಾಯುವವರಷ್ಟೇ’ ಎಂದು ಭಾನುವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.</p>.<p>‘ಮೇ 23ರ ತನಕ ಸರ್ಕಾರದ ಅಸ್ಥಿರ ತಪ್ಪಿಸಲಿಕ್ಕಾಗಿಯೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರೆಸಾರ್ಟ್ಗೆ ಮೊರೆ ಹೋಗಿದ್ದಾರೆ’ ಎಂದು ಲೇವಡಿ ಮಾಡಿದರು.</p>.<p>‘ಉತ್ತರ ಕರ್ನಾಟಕದ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ್ ಹಸ್ತಕ್ಷೇಪ ನಡೆಸುವುದು ಸರಿಯಲ್ಲ. ಇಲ್ಲಿ ನಾವೇ ಸಾಕಷ್ಟು ಮಂದಿ ಇದ್ದೇವೆ. ಮೊದಲು ಈ ಭಾಗದ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಿ’ ಎಂದು ಬಸನಗೌಡ ಹೇಳಿದರು.</p>.<p>‘ಡಿ.ಕೆ.ಶಿವಕುಮಾರ್ ಜಲಸಂಪನ್ಮೂಲ ಸಚಿವರಾದ ಬಳಿಕ ಇಲ್ಲಿನ ಬಹುತೇಕ ನೀರಾವರಿ ಯೋಜನೆಗಳ ಕಾಮಗಾರಿಗಳು ಸ್ಥಗಿತಗೊಂಡಿವೆ. ಕಮಿಷನ್ ಕೇಳುತ್ತಿರುವುದರಿಂದ ಗುತ್ತಿಗೆದಾರರ ಬಿಲ್ಗಳು ಮಂಜೂರಾಗದಾಗಿವೆ’ ಎಂದು ಯತ್ನಾಳ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>