<p><strong>ವಿಜಯಪುರ:</strong>‘ಬಿಜೆಪಿ ಕಾರ್ಯಕರ್ತರ ಪಕ್ಷ. ಎತ್ತರ, ದಾಢಸಿ ಇದ್ದಾಕ್ಷಣ ನಾಯಕನಾಗಲ್ಲ. ಇಲ್ಲಿ ಪಕ್ಷವೇ ಹೀರೋ. ರಾಜ್ಯ ಘಟಕದ ಅಧ್ಯಕ್ಷರ ಸ್ಥಾನಕ್ಕೆ ಟವೆಲ್ ಹಾಕಲು ಅದೇನು ಬಸ್ಸು–ರೈಲಿನ ಸೀಟಲ್ಲ’ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಯತ್ನಾಳ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ನೀಡಿದರು.</p>.<p>‘ವರಿಷ್ಠರು ಸಮರ್ಥರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡುತ್ತಾರೆ. ಅರ್ಹತೆ ಇದ್ದವರು ಆಗ್ತಾರೆ. ನಾನು ಆಕಾಂಕ್ಷಿಯಲ್ಲ. ಆದರೆ ಎಲ್ಲ ಅರ್ಹತೆಗಳನ್ನು ಹೊಂದಿರುವೆ’ ಎಂದು ಸೋಮವಾರ ನಗರದಲ್ಲಿ ಪತ್ರಕರ್ತರಿಗೆ ಪ್ರತಿಕ್ರಿಯಿಸಿದರು.</p>.<p>‘ನಾನು ಪಕ್ಷ ನಿಷ್ಠ. ನನ್ನ ರಾಜಕಾರಣ ಏನಿದ್ದರೂ ಬಿಜೆಪಿಯಲ್ಲೇ. ಪಕ್ಷ ವಹಿಸುವ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಉತ್ತರ ಕರ್ನಾಟಕ–ದಕ್ಷಿಣ ಕರ್ನಾಟಕ ಎಂಬ ಭಾಗ ಬೇಡ. ಈ ಭಾಗದವರಿಗೆ ಅಧ್ಯಕ್ಷ ಸ್ಥಾನ ಸಿಗಲಿ ಎಂಬುದಕ್ಕೆ ನನ್ನದು ಸಹಮತವಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಶಾಸಕ ಬಸನಗೌಡ ಪಾಟೀಲ ಯತ್ನಾಳ ರಾಜ್ಯ ಘಟಕದ ಅಧ್ಯಕ್ಷರಲ್ಲ, ರಾಷ್ಟ್ರೀಯ ಘಟಕದ ಅಧ್ಯಕ್ಷರಾದರೂ ನಾನು ಬಿಜೆಪಿ ಬಿಡಲ್ಲ. ನನ್ನ ರಾಜಕಾರಣ ಬಿಜೆಪಿಯಲ್ಲೇ’ ಎಂದು ಅಪ್ಪಾಸಾಹೇಬ ಪಟ್ಟಣಶೆಟ್ಟಿ ಪುನರುಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong>‘ಬಿಜೆಪಿ ಕಾರ್ಯಕರ್ತರ ಪಕ್ಷ. ಎತ್ತರ, ದಾಢಸಿ ಇದ್ದಾಕ್ಷಣ ನಾಯಕನಾಗಲ್ಲ. ಇಲ್ಲಿ ಪಕ್ಷವೇ ಹೀರೋ. ರಾಜ್ಯ ಘಟಕದ ಅಧ್ಯಕ್ಷರ ಸ್ಥಾನಕ್ಕೆ ಟವೆಲ್ ಹಾಕಲು ಅದೇನು ಬಸ್ಸು–ರೈಲಿನ ಸೀಟಲ್ಲ’ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಯತ್ನಾಳ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ನೀಡಿದರು.</p>.<p>‘ವರಿಷ್ಠರು ಸಮರ್ಥರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡುತ್ತಾರೆ. ಅರ್ಹತೆ ಇದ್ದವರು ಆಗ್ತಾರೆ. ನಾನು ಆಕಾಂಕ್ಷಿಯಲ್ಲ. ಆದರೆ ಎಲ್ಲ ಅರ್ಹತೆಗಳನ್ನು ಹೊಂದಿರುವೆ’ ಎಂದು ಸೋಮವಾರ ನಗರದಲ್ಲಿ ಪತ್ರಕರ್ತರಿಗೆ ಪ್ರತಿಕ್ರಿಯಿಸಿದರು.</p>.<p>‘ನಾನು ಪಕ್ಷ ನಿಷ್ಠ. ನನ್ನ ರಾಜಕಾರಣ ಏನಿದ್ದರೂ ಬಿಜೆಪಿಯಲ್ಲೇ. ಪಕ್ಷ ವಹಿಸುವ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಉತ್ತರ ಕರ್ನಾಟಕ–ದಕ್ಷಿಣ ಕರ್ನಾಟಕ ಎಂಬ ಭಾಗ ಬೇಡ. ಈ ಭಾಗದವರಿಗೆ ಅಧ್ಯಕ್ಷ ಸ್ಥಾನ ಸಿಗಲಿ ಎಂಬುದಕ್ಕೆ ನನ್ನದು ಸಹಮತವಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಶಾಸಕ ಬಸನಗೌಡ ಪಾಟೀಲ ಯತ್ನಾಳ ರಾಜ್ಯ ಘಟಕದ ಅಧ್ಯಕ್ಷರಲ್ಲ, ರಾಷ್ಟ್ರೀಯ ಘಟಕದ ಅಧ್ಯಕ್ಷರಾದರೂ ನಾನು ಬಿಜೆಪಿ ಬಿಡಲ್ಲ. ನನ್ನ ರಾಜಕಾರಣ ಬಿಜೆಪಿಯಲ್ಲೇ’ ಎಂದು ಅಪ್ಪಾಸಾಹೇಬ ಪಟ್ಟಣಶೆಟ್ಟಿ ಪುನರುಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>