<p><strong>ಬೆಂಗಳೂರು:</strong> ‘ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇದೇ ಬುಧವಾರ (ಡಿ. 18) ಬ್ಯಾಂಕ್ ನೌಕರರ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಬ್ಯಾಂಕ್ ನೌಕರರ ಸಂಯುಕ್ತ ವೇದಿಕೆಯ ರಾಜ್ಯ ಘಟಕದ ಜಂಟಿ ಸಂಚಾಲಕ ಅ.ನ.ಕೃಷ್ಣಮೂರ್ತಿ ತಿಳಿಸಿದರು.<br /> <br /> ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ದೇಶದಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಇದೇ ಬುಧವಾರ (ಡಿ. 18) ರಾಜ್ಯ ಘಟಕದ ವತಿಯಿಂದ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಮುಷ್ಕರಕ್ಕೆ ಬೆಂಬಲ ಸೂಚಿಸಲಾಗುವುದು ಎಂದರು.<br /> <br /> ಡಿಸೆಂಬರ್, 2012ರಿಂದಲೇ ಬ್ಯಾಂಕ್ ನೌಕರರ ವೇತನ ಪರಿಷ್ಕರಣೆಯಾಗಬೇಕಿದೆ. ಆದರೆ, ವೇತನ ಪರಿಷ್ಕರಣೆಯಲ್ಲಿ ಭಾರತೀಯ ಬ್ಯಾಂಕುಗಳ ಸಂಘವು ವಿಳಂಬ ನೀತಿಯನ್ನು ಅನುಸರಿಸುತ್ತಿದೆ. ಇದರಿಂದಾಗಿ ಮುಷ್ಕರ ಅನಿವಾರ್ಯವಾಗಿದೆ ಎಂದು ಹೇಳಿದರು.<br /> <br /> ವೇತನ ಪರಿಷ್ಕರಣೆ ಕುರಿತಂತೆ ಭಾರತೀಯ ಬ್ಯಾಂಕುಗಳ ಸಂಘದ ಜೊತೆಗೆ ಡಿ.14 ರಂದು ನಡೆಸಿದ ಸಭೆಯು ವಿಫಲವಾಗಿದೆ. ಬ್ಯಾಂಕ್ಗಳಲ್ಲಿ ಕೆಲಸದ ಒತ್ತಡದಿಂದಾಗಿ ನೌಕರರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ನೌಕರರ ಜೀವನ ನಿರ್ವಹಣೆ ಕಷ್ಟವಾಗಿದೆ. ಶೀಘ್ರ ವೇತನ ಪರಿಷ್ಕರಣೆಗೆ ಮುಂದಾಗಬೇಕು. ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳನ್ನು ಮಟ್ಟಹಾಕಲು ಕೇಂದ್ರ ಸರ್ಕಾರವು ಜನ ವಿರೋಧಿ ಬ್ಯಾಂಕಿಂಗ್ ಕ್ಷೇತ್ರದ ಸುಧಾರಣೆಗೆ ಮುಂದಾಗಿದೆ. ಸರ್ಕಾರ ಕೂಡಲೇ ಈ ನೀತಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇದೇ ಬುಧವಾರ (ಡಿ. 18) ಬ್ಯಾಂಕ್ ನೌಕರರ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಬ್ಯಾಂಕ್ ನೌಕರರ ಸಂಯುಕ್ತ ವೇದಿಕೆಯ ರಾಜ್ಯ ಘಟಕದ ಜಂಟಿ ಸಂಚಾಲಕ ಅ.ನ.ಕೃಷ್ಣಮೂರ್ತಿ ತಿಳಿಸಿದರು.<br /> <br /> ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ದೇಶದಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಇದೇ ಬುಧವಾರ (ಡಿ. 18) ರಾಜ್ಯ ಘಟಕದ ವತಿಯಿಂದ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಮುಷ್ಕರಕ್ಕೆ ಬೆಂಬಲ ಸೂಚಿಸಲಾಗುವುದು ಎಂದರು.<br /> <br /> ಡಿಸೆಂಬರ್, 2012ರಿಂದಲೇ ಬ್ಯಾಂಕ್ ನೌಕರರ ವೇತನ ಪರಿಷ್ಕರಣೆಯಾಗಬೇಕಿದೆ. ಆದರೆ, ವೇತನ ಪರಿಷ್ಕರಣೆಯಲ್ಲಿ ಭಾರತೀಯ ಬ್ಯಾಂಕುಗಳ ಸಂಘವು ವಿಳಂಬ ನೀತಿಯನ್ನು ಅನುಸರಿಸುತ್ತಿದೆ. ಇದರಿಂದಾಗಿ ಮುಷ್ಕರ ಅನಿವಾರ್ಯವಾಗಿದೆ ಎಂದು ಹೇಳಿದರು.<br /> <br /> ವೇತನ ಪರಿಷ್ಕರಣೆ ಕುರಿತಂತೆ ಭಾರತೀಯ ಬ್ಯಾಂಕುಗಳ ಸಂಘದ ಜೊತೆಗೆ ಡಿ.14 ರಂದು ನಡೆಸಿದ ಸಭೆಯು ವಿಫಲವಾಗಿದೆ. ಬ್ಯಾಂಕ್ಗಳಲ್ಲಿ ಕೆಲಸದ ಒತ್ತಡದಿಂದಾಗಿ ನೌಕರರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ನೌಕರರ ಜೀವನ ನಿರ್ವಹಣೆ ಕಷ್ಟವಾಗಿದೆ. ಶೀಘ್ರ ವೇತನ ಪರಿಷ್ಕರಣೆಗೆ ಮುಂದಾಗಬೇಕು. ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳನ್ನು ಮಟ್ಟಹಾಕಲು ಕೇಂದ್ರ ಸರ್ಕಾರವು ಜನ ವಿರೋಧಿ ಬ್ಯಾಂಕಿಂಗ್ ಕ್ಷೇತ್ರದ ಸುಧಾರಣೆಗೆ ಮುಂದಾಗಿದೆ. ಸರ್ಕಾರ ಕೂಡಲೇ ಈ ನೀತಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>