<p><strong>ನವದೆಹಲಿ: </strong>ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳಿಗೆ ಪುನರ್ಧನ ಯೋಜನೆಯಡಿ ₹ 80 ಸಾವಿರ ಕೋಟಿ ವೆಚ್ಚ ಮಾಡಲು ಒಪ್ಪಿಗೆ ನೀಡಬೇಕೆಂಬ ಪ್ರಸ್ತಾವವನ್ನು ಕೇಂದ್ರ ಸರ್ಕಾರವು ಸಂಸತ್ತಿನ ಮುಂದಿಟ್ಟಿದೆ.</p>.<p>ಪ್ರಸಕ್ತ ತ್ರೈಮಾಸಿಕದಲ್ಲಿಯೇ ಈ ಪುನರ್ಧನ ಯೋಜನೆ ಜಾರಿಗೆ ಬರಲಿದೆ. ಬಡ್ಡಿ ಪಾವತಿ ಮತ್ತು ಇತರ ಸಂಗತಿಗಳನ್ನು ಆರ್ಥಿಕ ವ್ಯವಹಾರಗಳ ಸಚಿವಾಲಯ ನೋಡಿಕೊಳ್ಳಲಿದೆ ಎಂದು ಹಣಕಾಸು ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ.</p>.<p>ಉದ್ದೇಶಿತ ಪುನರ್ಧನ ಬಾಂಡ್ಗಳು ಶಾಸನಬದ್ಧ ನಗದು ಅನುಪಾತ (ಎಸ್ಎಲ್ಆರ್) ಸ್ಥಾನಮಾನ ಹೊಂದಿರುವುದಿಲ್ಲ ಮತ್ತು ಅವುಗಳ ವಹಿವಾಟನ್ನೂ ನಡೆಸುವಂತಿಲ್ಲ. ಬ್ಯಾಂಕ್ಗಳು ತಮ್ಮ ಠೇವಣಿಗಳ ನಿರ್ದಿಷ್ಟ ಮೊತ್ತವನ್ನು ಸರ್ಕಾರಿ ಸಾಲಪತ್ರಗಳಲ್ಲಿ ತೊಡಗಿಸುವುದಕ್ಕೆ ‘ಎಸ್ಎಲ್ಆರ್’ ಎನ್ನುತ್ತಾರೆ.</p>.<p>‘ಎಸ್ಎಲ್ಆರ್’ ಸ್ಥಾನಮಾನ ಹೊಂದಿರುವ ಸಾಲಪತ್ರಗಳನ್ನು ಮಾತ್ರ ಷೇರುಪೇಟೆಗಳಲ್ಲಿ ಖರೀದಿ ಮತ್ತು ಮಾರಾಟ ಮಾಡಬಹುದಾಗಿದೆ.</p>.<p>ಬ್ಯಾಂಕ್ ಪುನರ್ಧನದ ಈ ₹ 80 ಸಾವಿರ ಕೋಟಿಗಳ ಹೆಚ್ಚುವರಿ ವೆಚ್ಚವನ್ನು ಸರ್ಕಾರಿ ಸಾಲಪತ್ರ ನೀಡಿಕೆ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳಿಗೆ ಪುನರ್ಧನ ಯೋಜನೆಯಡಿ ₹ 80 ಸಾವಿರ ಕೋಟಿ ವೆಚ್ಚ ಮಾಡಲು ಒಪ್ಪಿಗೆ ನೀಡಬೇಕೆಂಬ ಪ್ರಸ್ತಾವವನ್ನು ಕೇಂದ್ರ ಸರ್ಕಾರವು ಸಂಸತ್ತಿನ ಮುಂದಿಟ್ಟಿದೆ.</p>.<p>ಪ್ರಸಕ್ತ ತ್ರೈಮಾಸಿಕದಲ್ಲಿಯೇ ಈ ಪುನರ್ಧನ ಯೋಜನೆ ಜಾರಿಗೆ ಬರಲಿದೆ. ಬಡ್ಡಿ ಪಾವತಿ ಮತ್ತು ಇತರ ಸಂಗತಿಗಳನ್ನು ಆರ್ಥಿಕ ವ್ಯವಹಾರಗಳ ಸಚಿವಾಲಯ ನೋಡಿಕೊಳ್ಳಲಿದೆ ಎಂದು ಹಣಕಾಸು ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ.</p>.<p>ಉದ್ದೇಶಿತ ಪುನರ್ಧನ ಬಾಂಡ್ಗಳು ಶಾಸನಬದ್ಧ ನಗದು ಅನುಪಾತ (ಎಸ್ಎಲ್ಆರ್) ಸ್ಥಾನಮಾನ ಹೊಂದಿರುವುದಿಲ್ಲ ಮತ್ತು ಅವುಗಳ ವಹಿವಾಟನ್ನೂ ನಡೆಸುವಂತಿಲ್ಲ. ಬ್ಯಾಂಕ್ಗಳು ತಮ್ಮ ಠೇವಣಿಗಳ ನಿರ್ದಿಷ್ಟ ಮೊತ್ತವನ್ನು ಸರ್ಕಾರಿ ಸಾಲಪತ್ರಗಳಲ್ಲಿ ತೊಡಗಿಸುವುದಕ್ಕೆ ‘ಎಸ್ಎಲ್ಆರ್’ ಎನ್ನುತ್ತಾರೆ.</p>.<p>‘ಎಸ್ಎಲ್ಆರ್’ ಸ್ಥಾನಮಾನ ಹೊಂದಿರುವ ಸಾಲಪತ್ರಗಳನ್ನು ಮಾತ್ರ ಷೇರುಪೇಟೆಗಳಲ್ಲಿ ಖರೀದಿ ಮತ್ತು ಮಾರಾಟ ಮಾಡಬಹುದಾಗಿದೆ.</p>.<p>ಬ್ಯಾಂಕ್ ಪುನರ್ಧನದ ಈ ₹ 80 ಸಾವಿರ ಕೋಟಿಗಳ ಹೆಚ್ಚುವರಿ ವೆಚ್ಚವನ್ನು ಸರ್ಕಾರಿ ಸಾಲಪತ್ರ ನೀಡಿಕೆ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>