<p><strong>ನವದೆಹಲಿ:</strong> ‘ಹೆಚ್ಚಿನ ಪ್ರಯಾಣಿಕರನ್ನು ಆಕರ್ಷಿಸುವ ಉದ್ದೇಶದಿಂದ ಅಂತರರಾಷ್ಟ್ರೀಯ ವಿಮಾನಗಳ ಬಿಸಿನೆಸ್ ಕ್ಲಾಸ್ ಪ್ರಯಾಣಿಕರ ಬಳಕೆಗೆ ಲ್ಯಾಪ್ಟಾಪ್ ನೀಡಲು ನಿರ್ಧರಿಸಲಾಗಿದೆ’ ಎಂದು ಏರ್ಇಂಡಿಯಾ ವಿಮಾನಯಾನ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲಾ ತಿಳಿಸಿದ್ದಾರೆ.</p>.<p>‘ಸದ್ಯಕ್ಕೆ ಬಿಸಿನೆಸ್ ಕ್ಲಾಸ್ನ ಅರ್ಧದಷ್ಟು ಆಸನಗಳು ಖಾಲಿ ಉಳಿಯುತ್ತಿವೆ. ಹೀಗಾಗಿ ಪ್ರಯಾಣಿಕರ ಸಂಖ್ಯೆ ಹೆಚ್ಚಿಸಲು ಇರುವ ಮಾರ್ಗೋಪಾಯಗಳ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಗುಣಮಟ್ಟದ ಸೇವೆ, ಮನರಂಜನೆ ನೀಡುವ ಬಗ್ಗೆ ಆದ್ಯತೆ ನೀಡಲಾಗುವುದು’ ಎಂದು ಹೇಳಿದ್ದಾರೆ.</p>.<p>ಗುತ್ತಿಗೆ ಸಿಬ್ಬಂದಿ ವಜಾ: ನಷ್ಟದಲ್ಲಿಸಂಸ್ಥೆಯು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ 400ಕ್ಕೂ ಅಧಿಕ ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಿದೆ.</p>.<p>ನಿವೃತ್ತಿ ಪಡೆದಿದ್ದ ಸಿಬ್ಬಂದಿಯನ್ನು ತಂತ್ರಜ್ಞಾನೇತರ ಕೆಲಸಗಳಿಗಾಗಿ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿತ್ತು. ಇದೀಗ ಖರೋಲಾ ಅವರ ನಿರ್ದೇಶನದಂತೆ ಆ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯಲಾಗಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಏರ್ ಇಂಡಿಯಾ ಸಂಸ್ಥೆಯ ವಕ್ತಾರ ಜಿ.ಪಿ. ರಾವ್ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಹೆಚ್ಚಿನ ಪ್ರಯಾಣಿಕರನ್ನು ಆಕರ್ಷಿಸುವ ಉದ್ದೇಶದಿಂದ ಅಂತರರಾಷ್ಟ್ರೀಯ ವಿಮಾನಗಳ ಬಿಸಿನೆಸ್ ಕ್ಲಾಸ್ ಪ್ರಯಾಣಿಕರ ಬಳಕೆಗೆ ಲ್ಯಾಪ್ಟಾಪ್ ನೀಡಲು ನಿರ್ಧರಿಸಲಾಗಿದೆ’ ಎಂದು ಏರ್ಇಂಡಿಯಾ ವಿಮಾನಯಾನ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲಾ ತಿಳಿಸಿದ್ದಾರೆ.</p>.<p>‘ಸದ್ಯಕ್ಕೆ ಬಿಸಿನೆಸ್ ಕ್ಲಾಸ್ನ ಅರ್ಧದಷ್ಟು ಆಸನಗಳು ಖಾಲಿ ಉಳಿಯುತ್ತಿವೆ. ಹೀಗಾಗಿ ಪ್ರಯಾಣಿಕರ ಸಂಖ್ಯೆ ಹೆಚ್ಚಿಸಲು ಇರುವ ಮಾರ್ಗೋಪಾಯಗಳ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಗುಣಮಟ್ಟದ ಸೇವೆ, ಮನರಂಜನೆ ನೀಡುವ ಬಗ್ಗೆ ಆದ್ಯತೆ ನೀಡಲಾಗುವುದು’ ಎಂದು ಹೇಳಿದ್ದಾರೆ.</p>.<p>ಗುತ್ತಿಗೆ ಸಿಬ್ಬಂದಿ ವಜಾ: ನಷ್ಟದಲ್ಲಿಸಂಸ್ಥೆಯು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ 400ಕ್ಕೂ ಅಧಿಕ ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಿದೆ.</p>.<p>ನಿವೃತ್ತಿ ಪಡೆದಿದ್ದ ಸಿಬ್ಬಂದಿಯನ್ನು ತಂತ್ರಜ್ಞಾನೇತರ ಕೆಲಸಗಳಿಗಾಗಿ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿತ್ತು. ಇದೀಗ ಖರೋಲಾ ಅವರ ನಿರ್ದೇಶನದಂತೆ ಆ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯಲಾಗಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಏರ್ ಇಂಡಿಯಾ ಸಂಸ್ಥೆಯ ವಕ್ತಾರ ಜಿ.ಪಿ. ರಾವ್ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>