ಪ್ರಸಕ್ತ ವರ್ಷ ರಾಜ್ಯದ ಗದಗ, ಬಾಗಲಕೋಟೆ, ವಿಜಯಪುರ, ಹಾವೇರಿ, ಧಾರವಾಡ, ಬೆಳಗಾವಿ, ಯಾದಗಿರಿ, ಕಲಬುರ್ಗಿ, ಬೀದರ್ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಅಂದಾಜು 13.63 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಿಂಗಾರು ಹಂಗಾಮಿನ ಬೆಳೆಯನ್ನಾಗಿ ರೈತರು ಕಡಲೆಯನ್ನು ಬೆಳೆದಿದ್ದು, 8.10 ಲಕ್ಷ ಟನ್ ಇಳುವರಿ ಬಂದಿದೆ. ಆದರೆ, ಮುಕ್ತ ಮಾರುಕಟ್ಟೆಯಲ್ಲಿ ದರ ಕುಸಿದಿರುವುದರಿಂದ ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.