ನವದೆಹಲಿ: ಸಾಲ ಪಡೆದುಕೊಂಡರೆ ಅದನ್ನು ನಿಗದಿತ ಸಮಯದಲ್ಲಿ ಪಾವತಿ ಮಾಡುತ್ತಾರೆ ಎಂಬ ಭರವಸೆ ಇರುವ ಪ್ರಾಮಾಣಿಕ ವ್ಯಕ್ತಿಗಳಿಗೆ ಸಾರ್ವಜನಿಕ ವಲಯ ಬ್ಯಾಂಕ್ಗಳಿಂದ ನಿರಾತಂಕವಾಗಿ ಸಾಲ ಲಭ್ಯವಾಗುವ ನೀತಿಗಳನ್ನು ಜಾರಿ ಮಾಡಲು ಚಿಂತನೆ ನಡೆಸಿದೆ ಎಂದು ಕೇಂದ್ರ ವಿತ್ತ ಇಲಾಖೆಯ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ರಾಜೀವ್ ಕುಮಾರ್ ಹೇಳಿದ್ದಾರೆ.