<p><strong>ನವದೆಹಲಿ (ಪಿಟಿಐ): </strong>ಅಂತರ್ಜಾಲದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಕೃಷಿ ಮಾರುಕಟ್ಟೆ (ಇ–ಎನ್ಎಎಂ) ಬಳಕೆಗೆ ರೈತರು ಹೆಚ್ಚು ಗಮನ ನೀಡುತ್ತಿದ್ದಾರೆ.</p>.<p>ತಾವು ಬೆಳೆದ ಉತ್ಪನ್ನಗಳನ್ನು ಆನ್ಲೈನ್ನಲ್ಲಿ ಹರಾಜು ಹಾಕಲು, ಉತ್ತಮ ಬೆಲೆ ಪಡೆಯಲು ಮತ್ತು ಸಕಾಲಕ್ಕೆ ಪಾವತಿ ಮಾಡಲು<br /> ‘ಇ–ಎನ್ಎಎಂ’ ಬಳಸುತ್ತಿದ್ದಾರೆ ಎಂದು ಕೃಷಿ ಮಂಡಿಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸಗಟು ಮಂಡಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕೃತ ಕಮಿಷನ್ ಏಜೆಂಟ್ರ ಮೂಲಕ ರೈತರು ಆನ್ಲೈನ್ ಬಿಡ್ಡಿಂಗ್ ನಡೆಸುತ್ತಿದ್ದಾರೆ. ಈ ಸೌಲಭ್ಯದ ಬಗ್ಗೆ ರೈತರಲ್ಲಿ ಹೆಚ್ಚಿನ ಅರಿವು ಮೂಡುತ್ತಿದ್ದಂತೆಯೇ ಬಳಕೆ ಪ್ರಮಾಣ ಹೆಚ್ಚಾಗಲಿದೆ’.</p>.<p>‘ವ್ಯವಸ್ಥೆಯ ಬಗ್ಗೆ ವಿಶ್ವಾಸ ಹೆಚ್ಚು ಮೂಡಲಿದ್ದು, ಏಜೆಂಟ್ರ ನೆರವಿಲ್ಲದೆ ತಾವೇ ಖುದ್ದಾಗಿ ಬಿಡ್ಡಿಂಗ್ ನಡೆಸಲಿದ್ದಾರೆ. ಇದಕ್ಕಾಗಿ ಹಲವು ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.</p>.<p>‘ತೆಲಂಗಾಣದ ಸೂರ್ಯಪೇಟೆ ಮಂಡಿಯಲ್ಲಿ ಈಗ ಸಂಪೂರ್ಣವಾಗಿ ಆನ್ಲೈನ್ ಮೂಲಕವೇ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಉತ್ತಮ ಬೆಲೆ ಸಿಗುತ್ತದೆ ಎನ್ನುವ ಕಾರಣಕ್ಕಷ್ಟೇ ಅಲ್ಲದೆ ತಕ್ಷಣವೇ ಹಣವೂ ಸಿಗುತ್ತದೆ ಎನ್ನುವ ಉದ್ದೇಶದಿಂದ ಹೆಚ್ಚಿನ ರೈತರು ಈ ಸೌಲಭ್ಯ ಬಳಸುತ್ತಿದ್ದಾರೆ’ ಎಂದು ಸೂರ್ಯಪೇಟೆಯ ಸಗಟು ಮಂಡಿಯ ಕಾರ್ಯದರ್ಶಿ ಎಲ್ಲಯ್ಯ ತಿಳಿಸಿದ್ದಾರೆ.</p>.<p>‘ಇ–ನ್ಯಾಮ್’ಗೆ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ರೈತರಲ್ಲಿ ಅರಿವು ಮೂಡುತ್ತಿದ್ದಂತೆಯೇ ಸ್ವತಂತ್ರವಾಗಿ ಭಾಗವಹಿಸುವ ವಿಶ್ವಾಸ ಮೂಡಲಿದೆ’ ಎಂದು ಕೃಷಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p><strong>ಕರ್ನಾಟಕ ಮಾದರಿ</strong></p>.<p>ಕರ್ನಾಟಕದ ಎಪಿಎಂಸಿ ಮಾರುಕಟ್ಟೆಗಳಲ್ಲಿ ಜಾರಿಗೆ ತಂದಿರುವ ಇ–ಮಾರುಕಟ್ಟೆ ವ್ಯವಸ್ಥೆಯನ್ನೇ ಮಾದರಿಯಾಗಿಟ್ಟುಕೊಂಡು, ‘ನ್ಯಾಷನಲ್ ಅಗ್ರಿಕಲ್ಚರಲ್ ಮಾರ್ಕೆಟ್’ (ಎನ್ಎಎಂ)ಅನ್ನು ರಾಷ್ಟ್ರವ್ಯಾಪಿ ಜಾರಿಗೆ ತರಲಾಗಿದೆ. ಇಂಥದ್ದೊಂದು ವ್ಯವಸ್ಥೆ ಯನ್ನು ಮೊದಲ ಬಾರಿಗೆ ಪರಿಚಯಿಸಿದ ಕೀರ್ತಿ ಕರ್ನಾಟಕಕ್ಕೆ ಸಲ್ಲುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಅಂತರ್ಜಾಲದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಕೃಷಿ ಮಾರುಕಟ್ಟೆ (ಇ–ಎನ್ಎಎಂ) ಬಳಕೆಗೆ ರೈತರು ಹೆಚ್ಚು ಗಮನ ನೀಡುತ್ತಿದ್ದಾರೆ.</p>.<p>ತಾವು ಬೆಳೆದ ಉತ್ಪನ್ನಗಳನ್ನು ಆನ್ಲೈನ್ನಲ್ಲಿ ಹರಾಜು ಹಾಕಲು, ಉತ್ತಮ ಬೆಲೆ ಪಡೆಯಲು ಮತ್ತು ಸಕಾಲಕ್ಕೆ ಪಾವತಿ ಮಾಡಲು<br /> ‘ಇ–ಎನ್ಎಎಂ’ ಬಳಸುತ್ತಿದ್ದಾರೆ ಎಂದು ಕೃಷಿ ಮಂಡಿಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸಗಟು ಮಂಡಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕೃತ ಕಮಿಷನ್ ಏಜೆಂಟ್ರ ಮೂಲಕ ರೈತರು ಆನ್ಲೈನ್ ಬಿಡ್ಡಿಂಗ್ ನಡೆಸುತ್ತಿದ್ದಾರೆ. ಈ ಸೌಲಭ್ಯದ ಬಗ್ಗೆ ರೈತರಲ್ಲಿ ಹೆಚ್ಚಿನ ಅರಿವು ಮೂಡುತ್ತಿದ್ದಂತೆಯೇ ಬಳಕೆ ಪ್ರಮಾಣ ಹೆಚ್ಚಾಗಲಿದೆ’.</p>.<p>‘ವ್ಯವಸ್ಥೆಯ ಬಗ್ಗೆ ವಿಶ್ವಾಸ ಹೆಚ್ಚು ಮೂಡಲಿದ್ದು, ಏಜೆಂಟ್ರ ನೆರವಿಲ್ಲದೆ ತಾವೇ ಖುದ್ದಾಗಿ ಬಿಡ್ಡಿಂಗ್ ನಡೆಸಲಿದ್ದಾರೆ. ಇದಕ್ಕಾಗಿ ಹಲವು ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.</p>.<p>‘ತೆಲಂಗಾಣದ ಸೂರ್ಯಪೇಟೆ ಮಂಡಿಯಲ್ಲಿ ಈಗ ಸಂಪೂರ್ಣವಾಗಿ ಆನ್ಲೈನ್ ಮೂಲಕವೇ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಉತ್ತಮ ಬೆಲೆ ಸಿಗುತ್ತದೆ ಎನ್ನುವ ಕಾರಣಕ್ಕಷ್ಟೇ ಅಲ್ಲದೆ ತಕ್ಷಣವೇ ಹಣವೂ ಸಿಗುತ್ತದೆ ಎನ್ನುವ ಉದ್ದೇಶದಿಂದ ಹೆಚ್ಚಿನ ರೈತರು ಈ ಸೌಲಭ್ಯ ಬಳಸುತ್ತಿದ್ದಾರೆ’ ಎಂದು ಸೂರ್ಯಪೇಟೆಯ ಸಗಟು ಮಂಡಿಯ ಕಾರ್ಯದರ್ಶಿ ಎಲ್ಲಯ್ಯ ತಿಳಿಸಿದ್ದಾರೆ.</p>.<p>‘ಇ–ನ್ಯಾಮ್’ಗೆ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ರೈತರಲ್ಲಿ ಅರಿವು ಮೂಡುತ್ತಿದ್ದಂತೆಯೇ ಸ್ವತಂತ್ರವಾಗಿ ಭಾಗವಹಿಸುವ ವಿಶ್ವಾಸ ಮೂಡಲಿದೆ’ ಎಂದು ಕೃಷಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p><strong>ಕರ್ನಾಟಕ ಮಾದರಿ</strong></p>.<p>ಕರ್ನಾಟಕದ ಎಪಿಎಂಸಿ ಮಾರುಕಟ್ಟೆಗಳಲ್ಲಿ ಜಾರಿಗೆ ತಂದಿರುವ ಇ–ಮಾರುಕಟ್ಟೆ ವ್ಯವಸ್ಥೆಯನ್ನೇ ಮಾದರಿಯಾಗಿಟ್ಟುಕೊಂಡು, ‘ನ್ಯಾಷನಲ್ ಅಗ್ರಿಕಲ್ಚರಲ್ ಮಾರ್ಕೆಟ್’ (ಎನ್ಎಎಂ)ಅನ್ನು ರಾಷ್ಟ್ರವ್ಯಾಪಿ ಜಾರಿಗೆ ತರಲಾಗಿದೆ. ಇಂಥದ್ದೊಂದು ವ್ಯವಸ್ಥೆ ಯನ್ನು ಮೊದಲ ಬಾರಿಗೆ ಪರಿಚಯಿಸಿದ ಕೀರ್ತಿ ಕರ್ನಾಟಕಕ್ಕೆ ಸಲ್ಲುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>