ರೈತರ ಆರ್ಥಿಕ ಸ್ವಾವಲಂಬನೆಗೆ ಯಾವುದೇ ವಿಶೇಷ ಪ್ಯಾಕೇಜ್ ಇಲ್ಲ. ನಿರುದ್ಯೋಗಿಗಳಿಗೆ ಉದ್ಯೋಗ ಕೊಡುವ ಬಗ್ಗೆ ಪ್ರಸ್ತಾಪಿಸಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಹೊಸ ಕೈಗಾರಿಕೆ ಸ್ಥಾಪಿಸುವ ಕುರಿತು ಘೋಷಣೆಗಳಿಲ್ಲ. ಆದರೆ, ₹250 ಕೋಟಿ ವೆಚ್ಚದಲ್ಲಿ ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆಯ ಕೇಂದ್ರ ಆರಂಭಿಸುವ ಬಗ್ಗೆ ಪ್ರಸ್ತಾಪಿಸಿರುವುದು ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.