ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐತಿಹಾಸಿಕ ನಿರ್ಣಯ: ಶಾಸಕ ಬಿ. ನಾರಾಯಣರಾವ್

ಅನುಭವ ಮಂಟಪಕ್ಕೆ ಅನುದಾನ
Last Updated 5 ಮಾರ್ಚ್ 2020, 14:46 IST
ಅಕ್ಷರ ಗಾತ್ರ

ಬೀದರ್: ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಪ್ರಸಕ್ತ ಸಾಲಿನ ಮುಂಗಡಪತ್ರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ₹500 ಕೋಟಿ ಅನುದಾನ ಪ್ರಕಟಿಸಿರುವುದು ಐತಿಹಾಸಿಕ ನಿರ್ಣಯವಾಗಿದೆ ಎಂದು ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ಪ್ರತಿಕ್ರಿಯಿಸಿದ್ದಾರೆ.

ಬಸವಾದಿ ಶರಣರು 12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು. ಜಗತ್ತಿಗೆ ಮಾನವೀಯ ಮೌಲ್ಯಗಳನ್ನು ನೀಡಿದ್ದರು. ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಪರಿಚಯಿಸಿದ್ದರು ಎಂದು ತಿಳಿಸಿದ್ದಾರೆ.

ನೂತನ ಅನುಭವ ಮಂಟಪ ನಿರ್ಮಿಸಬೇಕು ಎಂಬುದು ಜನರ ಬಹುದಿನಗಳ ಬೇಡಿಕೆಯಾಗಿತ್ತು. ಜನರ ಬೇಡಿಕೆಗೆ ಸ್ಪಂದಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ₹500 ಕೋಟಿ ಅನುದಾನ ಮೀಸಲಿರಿಸಿ, ₹100 ಕೋಟಿ ತಕ್ಷಣ ಬಿಡುಗಡೆ ಮಾಡುವುದಾಗಿ ತಿಳಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಹೇಳಿದ್ದಾರೆ.

ನೂತನ ಅನುಭವ ಮಂಟಪ ನಿರ್ಮಾಣದ ನಂತರ ಬಸವಕಲ್ಯಾಣ ಇಡೀ ವಿಶ್ವದ ಗಮನ ಸೆಳೆಯಲಿದೆ. ವಿಶ್ವದ ಎಲ್ಲೆಡೆಯಿಂದ ಜನ ಬಸವಕಲ್ಯಾಣಕ್ಕೆ ಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿಗೆ ಅಭಿನಂದನೆ: ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ₹500 ಕೋಟಿ ಅನುದಾನ ಘೋಷಿಸಿದ ಪ್ರಯುಕ್ತ ಶಾಸಕ ಬಿ. ನಾರಾಯಣರಾವ್ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT