<p>ಬೆಂಗಳೂರು: ಅಬಕಾರಿ ತೆರಿಗೆ ವ್ಯವಸ್ಥೆಯನ್ನು ಪುನರ್ಪರಿಶೀಲಿಸಲು ರಾಜ್ಯ ಸರ್ಕಾರವು ನಿವೃತ್ತ ಐಎಎಸ್ ಅಧಿಕಾರಿ ಡಾ.ಕೆ.ಪಿ.ಕೃಷ್ಣನ್ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸಂಪನ್ಮೂಲ ಸಂಗ್ರಹ ಸಮಿತಿಯು, ರಾಜ್ಯ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ.</p>.<p>‘ರಾಜ್ಯದಲ್ಲಿ ಮದ್ಯದ ಸ್ವರೂಪ ಮತ್ತು ಬೆಲೆಯ ಆಧಾರದ ಮೇಲೆ ತೆರಿಗೆ ಅಥವಾ ಅಬಕಾರಿ ಸುಂಕ ವಿಧಿಸಲಾಗುತ್ತಿದೆ. ಈ ವ್ಯವಸ್ಥೆಯನ್ನು ಬದಲಿಸಬೇಕು. ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ದರವನ್ನು ನಿಗದಿ ಮಾಡಬೇಕು’ ಎಂದು ಸಮಿತಿಯು ಶಿಫಾರಸು ಮಾಡಿದೆ.</p>.<p>‘ಮದ್ಯದಲ್ಲಿರುವ ಪ್ರತಿ ಒಂದು ಲೀಟರ್ ಶುದ್ಧ ಆಲ್ಕೋಹಾಲ್ ಮೇಲೆ ₹1,000 ಹೆಚ್ಚುವರಿ ಅಬಕಾರಿ ಸುಂಕ ವಿಧಿಸಬೇಕು. ಹಂತಹಂತವಾಗಿ ಈ ಮೊತ್ತವನ್ನು 2028–29ರ ಹೊತ್ತಿಗೆ ₹2,000ಕ್ಕೆ ಹೆಚ್ಚಿಸಬೇಕು. ಮದ್ಯದ ದರವನ್ನು ವಿಪರೀತ ಹೆಚ್ಚಳ ಮಾಡಿ, ಜನರು ಅಕ್ರಮ ಮದ್ಯದತ್ತ ತೆರಳುವಂತೆ ಮಾಡಬಾರದು’ ಎಂದಿದೆ.</p>.<p>ರಾಜ್ಯ ಸರ್ಕಾರವು ಈಚೆಗೆ ಹೊರಡಿಸಿರುವ ನೂತನ ಕರಡು ಅಬಕಾರಿ ನೀತಿಯಲ್ಲಿ ಈ ಶಿಫಾರಸುಗಳನ್ನು ಅಳವಡಿಸಿಕೊಂಡಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-51-1757103850</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಅಬಕಾರಿ ತೆರಿಗೆ ವ್ಯವಸ್ಥೆಯನ್ನು ಪುನರ್ಪರಿಶೀಲಿಸಲು ರಾಜ್ಯ ಸರ್ಕಾರವು ನಿವೃತ್ತ ಐಎಎಸ್ ಅಧಿಕಾರಿ ಡಾ.ಕೆ.ಪಿ.ಕೃಷ್ಣನ್ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸಂಪನ್ಮೂಲ ಸಂಗ್ರಹ ಸಮಿತಿಯು, ರಾಜ್ಯ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ.</p>.<p>‘ರಾಜ್ಯದಲ್ಲಿ ಮದ್ಯದ ಸ್ವರೂಪ ಮತ್ತು ಬೆಲೆಯ ಆಧಾರದ ಮೇಲೆ ತೆರಿಗೆ ಅಥವಾ ಅಬಕಾರಿ ಸುಂಕ ವಿಧಿಸಲಾಗುತ್ತಿದೆ. ಈ ವ್ಯವಸ್ಥೆಯನ್ನು ಬದಲಿಸಬೇಕು. ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ದರವನ್ನು ನಿಗದಿ ಮಾಡಬೇಕು’ ಎಂದು ಸಮಿತಿಯು ಶಿಫಾರಸು ಮಾಡಿದೆ.</p>.<p>‘ಮದ್ಯದಲ್ಲಿರುವ ಪ್ರತಿ ಒಂದು ಲೀಟರ್ ಶುದ್ಧ ಆಲ್ಕೋಹಾಲ್ ಮೇಲೆ ₹1,000 ಹೆಚ್ಚುವರಿ ಅಬಕಾರಿ ಸುಂಕ ವಿಧಿಸಬೇಕು. ಹಂತಹಂತವಾಗಿ ಈ ಮೊತ್ತವನ್ನು 2028–29ರ ಹೊತ್ತಿಗೆ ₹2,000ಕ್ಕೆ ಹೆಚ್ಚಿಸಬೇಕು. ಮದ್ಯದ ದರವನ್ನು ವಿಪರೀತ ಹೆಚ್ಚಳ ಮಾಡಿ, ಜನರು ಅಕ್ರಮ ಮದ್ಯದತ್ತ ತೆರಳುವಂತೆ ಮಾಡಬಾರದು’ ಎಂದಿದೆ.</p>.<p>ರಾಜ್ಯ ಸರ್ಕಾರವು ಈಚೆಗೆ ಹೊರಡಿಸಿರುವ ನೂತನ ಕರಡು ಅಬಕಾರಿ ನೀತಿಯಲ್ಲಿ ಈ ಶಿಫಾರಸುಗಳನ್ನು ಅಳವಡಿಸಿಕೊಂಡಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-51-1757103850</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>