ಬೆಂಗಳೂರು: ಚೊಚ್ಚಲ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸುವ ಸರ್ವಸ್ಪರ್ಶಿ ಬಜೆಟ್ ಇದಾಗಿದೆ ಎಂದು ಹೇಳಿದ್ದಾರೆ.
ಈ ಬಜೆಟ್ ನವಕರ್ನಾಟಕ ನಿರ್ಮಾಣದ ಪರಿಕಲ್ಪನೆಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಹೊಸಚೈತನ್ಯ ಮತ್ತು ಶಕ್ತಿ ನೀಡುತ್ತಿದೆ ಎಂದು ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ಬಜೆಟ್ನಲ್ಲಿ ₹1,000 ಕೋಟಿ ಅನುದಾನ ಸ್ವಾಗತಾರ್ಹ: ಡಿಕೆಶಿ
ಈ ಕುರಿತು ಟ್ವೀಟಿಸಿರುವ ಯಡಿಯೂರಪ್ಪ, 'ಇಂದು ತಮ್ಮ ಮೊದಲ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ಅವರು ಮಂಡಿಸಿದ ಬಜೆಟ್ ಜನರ ನಿರೀಕ್ಷೆಗಳಿಗೆ ತಕ್ಕಂತೆ, ರಾಜ್ಯದ ಪ್ರಗತಿ, ಸ್ವಾವಲಂಬನೆಗೆ ಒತ್ತು ನೀಡುವ ಜೊತೆಗೆ ನವಕರ್ನಾಟಕ ನಿರ್ಮಾಣದ ಪರಿಕಲ್ಪನೆಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಹೊಸಚೈತನ್ಯ ಮತ್ತು ಶಕ್ತಿ ನೀಡುತ್ತಿದೆ' ಎಂದು ಹೇಳಿದ್ದಾರೆ.
ಇಂದು ತಮ್ಮ ಮೊದಲ ಬಜೆಟ್ ಮಂಡಿಸಿದ ಮುಖ್ಯಮಂತ್ರಿ @BSBommai ಅವರಿಗೆ ಅಭಿನಂದನೆಗಳು. ಅವರು ಮಂಡಿಸಿದ #KarnatakaBudget2022 ಜನರ ನಿರೀಕ್ಷೆಗಳಿಗೆ ತಕ್ಕಂತೆ, ರಾಜ್ಯದ ಪ್ರಗತಿ, ಸ್ವಾವಲಂಬನೆಗೆ ಒತ್ತು ನೀಡುವ ಜೊತೆಗೆ ನವಕರ್ನಾಟಕ ನಿರ್ಮಾಣದ ಪರಿಕಲ್ಪನೆಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಹೊಸಚೈತನ್ಯ ಮತ್ತು ಶಕ್ತಿ ನೀಡುತ್ತಿದೆ. (1/3)
— B.S. Yediyurappa (@BSYBJP) March 4, 2022
'ಸಾಂಕ್ರಾಮಿಕದ ಸವಾಲುಗಳ ನಿರ್ವಹಣೆಯ ನಡುವೆ ಈ ಬಜೆಟ್ ಅತ್ಯಂತ ಆಶಾದಾಯಕವಾಗಿದೆ. ರೈತರು, ನೀರಾವರಿ, ಮೂಲಸೌಕರ್ಯ, ಆರ್ಥಿಕ ಅಭಿವೃದ್ಧಿ, ಉದ್ಯೋಗ ಸೃಷ್ಠಿ, ಅಧಿಕ ಹೂಡಿಕೆಗೆ ಆದ್ಯತೆಯ ಜೊತೆಗೆ ಯುವಶಕ್ತಿ, ಮಹಿಳೆಯರು ಮತ್ತು ದುರ್ಬಲ ವರ್ಗಗಳ ಜನರ ಸಬಲೀಕರಣಕ್ಕೆ ಉತ್ತೇಜನ ನೀಡಲಾಗಿದೆ. ಕೃಷಿ, ಪೂರಕ ವಲಯಗಳಿಗೆ ₹33,700 ಕೋಟಿ ಮೀಸಲು, ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ ₹43,188 ಕೋಟಿ, ಬೆಂಗಳೂರು ಸಮಗ್ರ ಅಭಿವೃದ್ಧಿಗೆ ₹8,409 ಕೋಟಿ ನಿಗದಿಪಡಿಸಿರುವುದು ಸ್ವಾಗತಾರ್ಹ' ಎಂದು ಉಲ್ಲೇಖಿಸಿದ್ದಾರೆ.
ಸಾಂಕ್ರಾಮಿಕದ ಸವಾಲುಗಳ ನಿರ್ವಹಣೆಯ ನಡುವೆ ಈ ಬಜೆಟ್ ಅತ್ಯಂತ ಆಶಾದಾಯಕವಾಗಿದೆ. ರೈತರು, ನೀರಾವರಿ, ಮೂಲಸೌಕರ್ಯ, ಆರ್ಥಿಕ ಅಭಿವೃದ್ಧಿ, ಉದ್ಯೋಗ ಸೃಷ್ಠಿ, ಅಧಿಕ ಹೂಡಿಕೆಗೆ ಆದ್ಯತೆಯ ಜೊತೆಗೆ ಯುವಶಕ್ತಿ, ಮಹಿಳೆಯರು ಮತ್ತು ದುರ್ಬಲ ವರ್ಗಗಳ ಜನರ ಸಬಲೀಕರಣಕ್ಕೆ ಉತ್ತೇಜನ ನೀಡಲಾಗಿದೆ. ಕೃಷಿ, ಪೂರಕ ವಲಯಗಳಿಗೆ 33,700 ಕೋಟಿ ರೂ ಮೀಸಲು, (2/3)
— B.S. Yediyurappa (@BSYBJP) March 4, 2022
'ಸರ್ವರಿಗೂ ಸಮಪಾಲು, ಸಮಬಾಳು, ಸಾಮಾಜಿಕ ನ್ಯಾಯ, ಅಂತ್ಯೋದಯದ ನಮ್ಮ ಬದ್ಧತೆಗೆ ಅನುಗುಣವಾಗಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸುವ ಸರ್ವಸ್ಪರ್ಶಿ ಬಜೆಟ್ ಇದಾಗಿದೆ' ಎಂದು ತಿಳಿಸಿದ್ದಾರೆ.
ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ 43,188 ಕೋಟಿ ರೂ, ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ ನಿಗದಿಪಡಿಸಿರುವುದು ಸ್ವಾಗತಾರ್ಹ. ಸರ್ವರಿಗೂ ಸಮಪಾಲು, ಸಮಬಾಳು, ಸಾಮಾಜಿಕ ನ್ಯಾಯ, ಅಂತ್ಯೋದಯದ ನಮ್ಮ ಬದ್ಧತೆಗೆ ಅನುಗುಣವಾಗಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸುವ ಸರ್ವಸ್ಪರ್ಶಿ ಬಜೆಟ್ ಇದಾಗಿದೆ. (3/3)
— B.S. Yediyurappa (@BSYBJP) March 4, 2022
ಇವನ್ನೂ ಓದಿ:
Karnataka Budget: ಬೊಮ್ಮಾಯಿ ಬಜೆಟ್ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?
Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ
ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಡುಗೆ; ಸೇವೆ ಆಧಾರದಲ್ಲಿ ಗೌರವಧನ ಹೆಚ್ಚಳ
ಚೆನ್ನೈ-ಬೆಂಗಳೂರು-ಮೈಸೂರು ಹೈಸ್ಪೀಡ್ ರೈಲು; ಕೇಂದ್ರದೊಂದಿಗೆ ಸಹಯೋಗ: ಬೊಮ್ಮಾಯಿ
ಬೊಮ್ಮಾಯಿ ಬಜೆಟ್ 2022: ದೇವಾಲಯಗಳಿಗೆ ಸ್ವಾಯತ್ತತೆ, ತಸ್ತೀಕ್ ಮೊತ್ತ ಹೆಚ್ಚಳ
ರಾಜ್ಯದ ಪ್ರಮುಖ ನಗರಗಳಲ್ಲಿ 'ನಮ್ಮ ಕ್ಲಿನಿಕ್' ಸ್ಥಾಪನೆ: ಸಿಎಂ ಬೊಮ್ಮಾಯಿ
ಬೊಮ್ಮಾಯಿ ಬಜೆಟ್: ರೇಷ್ಮೆ, ಪಶುಸಂಗೋಪನೆ ಕ್ಷೇತ್ರಗಳಿಗೇನು ಕೊಡುಗೆ?
ರಾಜ್ಯ ಬಜೆಟ್: ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ; ಹೊಸ 7 ವಿ.ವಿ ಸ್ಥಾಪನೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.