<p id="page-title"><strong>ನವದೆಹಲಿ: </strong>ಕೇಂದ್ರ ಸರ್ಕಾರದ2020ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,ತೆರಿಗೆ ಸುಧಾರಣೆ ಮಂತ್ರ ಪಠಿಸಿದ್ದು ವೈಯಕ್ತಿಕ ತೆರಿಗೆ ಪಾವತಿದಾರರಿಗೆ ಕೆಲವುವಿನಾಯಿತಿ ಘೋಷಿಸಿದರು.</p>.<p>ತೆರಿಗೆ ಪಾವತಿ ವ್ಯವಸ್ಥೆಯನ್ನು ಸರಳಗೊಳಿಸುವುದಾಗಿ ಹೇಳಿದ ನಿರ್ಮಲಾ,ಕಾಯ್ದೆಯಲ್ಲಿ ಸುಧಾರಣೆ ತಂದು ಹೊಸ ವ್ಯವಸ್ಥೆ ಜಾರಿ ಮಾಡುವುದಾಗಿ ಎಂದು ಭರವಸೆ ನೀಡಿದರು.</p>.<p>* ₹ 2.5ಲಕ್ಷದ ವರೆಗೂ ಆದಾಯ ಹೊಂದಿರುವವರರಿಗೆಯಾವುದೇ ತೆರಿಗೆ ಇಲ್ಲವೆಂದ ಸಚಿವೆ, ಮಧ್ಯಂತರ ಬಜೆಟ್ನಲ್ಲಿ ಘೋಷಿಸಿದ್ದ ಹಾಗೆಯೇ₹ 2.5 ಲಕ್ಷದಿಂದ5 ಲಕ್ಷದ ವರೆಗೆ ಆದಾಯ ಹೊಂದಿರುವರಿಗೆ ಶೆ.5ರಷ್ಟು ತರಿಗೆ ಮುಂದುವರಿಸಿದ್ದಾರೆ.</p>.<p>* ₹ 5 ಲಕ್ಷದಿಂದ ₹ 7.5 ಆದಾಯ ಹೊಂದಿದ್ದವರು ಈ ಹಿಂದೆ ₹ 20 ರಷ್ಟು ತೆರಿಗೆ ಪಾವತಿಸಬೇಕಿತ್ತು. ಆದರೆ, ಅದನ್ನು ಶೇ. 10ಕ್ಕೆ ಇಳಿಸಲಾಗಿದೆ.</p>.<p>* ₹ 7.5 ಲಕ್ಷದಿಂದ ₹ 10 ಲಕ್ಷದ ವರೆಗೆ ಆದಾಯ ಹೊಂದಿರುವವರು ಶೇ.15 ರಷ್ಟು ತೆರಿಗೆ ಪಾವತಿಸಿದರೆ ಸಾಕು. ಈ ವರ್ಗದ ಆದಾಯದಾರರಿಗೆಈ ಹಿಂದೆ ಶೇ.20 ರಷ್ಟುತೆರಿಗೆ ದರವಿತ್ತು.</p>.<p>*₹ 10 ಲಕ್ಷದಿಂದ ₹ 12.5 ಲಕ್ಷದ ವರೆಗೆ ಆದಾಯ ಹೊಂದಿರುವವರರುಈ ಹಿಂದೆ ಶೇ.30 ರಷ್ಟು ತೆರಿಗೆ ಪಾವತಿಸಬೇಕಿತ್ತು. ಅದನ್ನು ಶೇ. 20ಕ್ಕೆ ಇಳಿಸಲಾಗಿದೆ.</p>.<p>* ₹ 12.5 ಲಕ್ಷದಿಂದ ₹ 15 ಲಕ್ಷದ ವರೆಗೆ ಆದಾಯ ಹೊಂದಿರುವವರಿಗೆಸದ್ಯ ಇರುವಶೇ.30 ರಷ್ಟುತೆರಿಗೆ ಪಾವತಿಸಬೇಕಿತ್ತು. ಅದನ್ನು ಶೇ. 20ಕ್ಕೆ ಇಳಿಸಲಾಗಿದೆ.</p>.<p>* ₹ 15 ಲಕ್ಷಕ್ಕಿಂತ ಹೆಚ್ಚಿ ಆದಾಯ ಹೊಂದಿರುವರು ಈಗ ಇರುವ ಶೇ.30ರ ದರದಲ್ಲೇ ತೆರಿಗೆ ಪಾವತಿಸಬೇಕಿದೆ.</p>.<p>ಸದ್ಯ ನೀಡಲಾಗಿರುವ ತೆರಿಗೆ ವಿನಾಯಿತಿಯಿಂದಾಗಿ ವಾರ್ಷಿಕ ₹ 40 ಸಾವಿರ ಕೋಟಿ ಹೊರೆಯಾಗಲಿದೆ ಎಂದು ಹೇಳಿರುವ ನಿರ್ಮಲಾ ಸೀತಾರಾಮನ್, ಹೊಸ ನಿಯಮವು ತೆರಿಗೆದಾರರಿಗೆ ಕಡ್ಡಾಯವಲ್ಲ. ಅದು ಆಯ್ಕೆಯಾಗಿದ್ದು, ತೆರಿಗೆದಾರರು ಬಯಸಿದರೆ ಹಳೆಯ ನಿಯಮವನ್ನೇ ಆಯ್ಕೆ ಮಾಡಿಕೊಳ್ಳಬಹದುಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p id="page-title"><strong>ನವದೆಹಲಿ: </strong>ಕೇಂದ್ರ ಸರ್ಕಾರದ2020ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,ತೆರಿಗೆ ಸುಧಾರಣೆ ಮಂತ್ರ ಪಠಿಸಿದ್ದು ವೈಯಕ್ತಿಕ ತೆರಿಗೆ ಪಾವತಿದಾರರಿಗೆ ಕೆಲವುವಿನಾಯಿತಿ ಘೋಷಿಸಿದರು.</p>.<p>ತೆರಿಗೆ ಪಾವತಿ ವ್ಯವಸ್ಥೆಯನ್ನು ಸರಳಗೊಳಿಸುವುದಾಗಿ ಹೇಳಿದ ನಿರ್ಮಲಾ,ಕಾಯ್ದೆಯಲ್ಲಿ ಸುಧಾರಣೆ ತಂದು ಹೊಸ ವ್ಯವಸ್ಥೆ ಜಾರಿ ಮಾಡುವುದಾಗಿ ಎಂದು ಭರವಸೆ ನೀಡಿದರು.</p>.<p>* ₹ 2.5ಲಕ್ಷದ ವರೆಗೂ ಆದಾಯ ಹೊಂದಿರುವವರರಿಗೆಯಾವುದೇ ತೆರಿಗೆ ಇಲ್ಲವೆಂದ ಸಚಿವೆ, ಮಧ್ಯಂತರ ಬಜೆಟ್ನಲ್ಲಿ ಘೋಷಿಸಿದ್ದ ಹಾಗೆಯೇ₹ 2.5 ಲಕ್ಷದಿಂದ5 ಲಕ್ಷದ ವರೆಗೆ ಆದಾಯ ಹೊಂದಿರುವರಿಗೆ ಶೆ.5ರಷ್ಟು ತರಿಗೆ ಮುಂದುವರಿಸಿದ್ದಾರೆ.</p>.<p>* ₹ 5 ಲಕ್ಷದಿಂದ ₹ 7.5 ಆದಾಯ ಹೊಂದಿದ್ದವರು ಈ ಹಿಂದೆ ₹ 20 ರಷ್ಟು ತೆರಿಗೆ ಪಾವತಿಸಬೇಕಿತ್ತು. ಆದರೆ, ಅದನ್ನು ಶೇ. 10ಕ್ಕೆ ಇಳಿಸಲಾಗಿದೆ.</p>.<p>* ₹ 7.5 ಲಕ್ಷದಿಂದ ₹ 10 ಲಕ್ಷದ ವರೆಗೆ ಆದಾಯ ಹೊಂದಿರುವವರು ಶೇ.15 ರಷ್ಟು ತೆರಿಗೆ ಪಾವತಿಸಿದರೆ ಸಾಕು. ಈ ವರ್ಗದ ಆದಾಯದಾರರಿಗೆಈ ಹಿಂದೆ ಶೇ.20 ರಷ್ಟುತೆರಿಗೆ ದರವಿತ್ತು.</p>.<p>*₹ 10 ಲಕ್ಷದಿಂದ ₹ 12.5 ಲಕ್ಷದ ವರೆಗೆ ಆದಾಯ ಹೊಂದಿರುವವರರುಈ ಹಿಂದೆ ಶೇ.30 ರಷ್ಟು ತೆರಿಗೆ ಪಾವತಿಸಬೇಕಿತ್ತು. ಅದನ್ನು ಶೇ. 20ಕ್ಕೆ ಇಳಿಸಲಾಗಿದೆ.</p>.<p>* ₹ 12.5 ಲಕ್ಷದಿಂದ ₹ 15 ಲಕ್ಷದ ವರೆಗೆ ಆದಾಯ ಹೊಂದಿರುವವರಿಗೆಸದ್ಯ ಇರುವಶೇ.30 ರಷ್ಟುತೆರಿಗೆ ಪಾವತಿಸಬೇಕಿತ್ತು. ಅದನ್ನು ಶೇ. 20ಕ್ಕೆ ಇಳಿಸಲಾಗಿದೆ.</p>.<p>* ₹ 15 ಲಕ್ಷಕ್ಕಿಂತ ಹೆಚ್ಚಿ ಆದಾಯ ಹೊಂದಿರುವರು ಈಗ ಇರುವ ಶೇ.30ರ ದರದಲ್ಲೇ ತೆರಿಗೆ ಪಾವತಿಸಬೇಕಿದೆ.</p>.<p>ಸದ್ಯ ನೀಡಲಾಗಿರುವ ತೆರಿಗೆ ವಿನಾಯಿತಿಯಿಂದಾಗಿ ವಾರ್ಷಿಕ ₹ 40 ಸಾವಿರ ಕೋಟಿ ಹೊರೆಯಾಗಲಿದೆ ಎಂದು ಹೇಳಿರುವ ನಿರ್ಮಲಾ ಸೀತಾರಾಮನ್, ಹೊಸ ನಿಯಮವು ತೆರಿಗೆದಾರರಿಗೆ ಕಡ್ಡಾಯವಲ್ಲ. ಅದು ಆಯ್ಕೆಯಾಗಿದ್ದು, ತೆರಿಗೆದಾರರು ಬಯಸಿದರೆ ಹಳೆಯ ನಿಯಮವನ್ನೇ ಆಯ್ಕೆ ಮಾಡಿಕೊಳ್ಳಬಹದುಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>