ಅಮೃತ ಕಾಲದ ಪರಿಕಲ್ಪನೆಯು ಮೂಲಸೌಕರ್ಯ, ಉತ್ಪಾದನೆ, ಡಿಜಿಟಲ್ ಮತ್ತು ಸಾಮಾಜಿಕ ಬೆಳವಣಿಗೆಯನ್ನು ಒಳಗೊಂಡಿದೆ. ಅದು ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ. ದೇಶವನ್ನು ಅಭಿವೃದ್ಧಿ ಹೊಂದಿದ ದೇಶಗಳ ಸಾಲಿನಲ್ಲಿ ನಿಲ್ಲಿಸಲಿದೆ. ಆರ್ಥಿಕತೆಯನ್ನು ಜಾಗತಿಕವಾಗಿ ಮೂರನೇ ಸ್ಥಾನಕ್ಕೇರಿಸಲಿದೆ. ಅಂತಹ ಬೆಳವಣಿಗೆಯನ್ನು ಸಾಧಿಸಲು ನಾವೀನ್ಯತೆ ಮತ್ತು ಸುಧಾರಣೆ ಎಂಬುದು ಪ್ರಮುಖ ಸಾಧನವಾಗಲಿದೆ ಎಂದೂ ನಿರ್ಮಲಾ ಇದೇ ವೇಳೆ ಹೇಳಿದ್ದಾರೆ.