<p><strong>ಬೆಂಗಳೂರು:</strong> ‘ಅತಿಸಣ್ಣ, ಸಣ್ಣ ಉದ್ಯಮಗಳ (ಎಂಎಸ್ಇ) ಬೆಳವಣಿಗೆಗೆ ಬಜೆಟ್ ಪೂರಕವಾಗಿದೆ. ಇವುಗಳಿಗೆ ಸಾಲ, ಕೌಶಲ ಅಭಿವೃದ್ಧಿ, ನಾವೀನ್ಯ ಮತ್ತು ವ್ಯವಹಾರ ಉತ್ತೇಜನಕ್ಕೆ ಆದ್ಯತೆ ಸಿಕ್ಕಿದೆ’ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಅಧ್ಯಕ್ಷ ಎಂ.ಜಿ. ರಾಜಗೋಪಾಲ್ ಹೇಳಿದ್ದಾರೆ.</p>.<p>ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳ (ಎಂಎಸ್ಎಂಇ) ವರ್ಗೀಕರಣ ಮಾನದಂಡವನ್ನು ಪರಿಷ್ಕರಿಸುವುದು ಒಳ್ಳೆಯ ಸುಧಾರಣೆಯಾಗಿದೆ. ಇದರಿಂದ ಸರ್ಕಾರದ ಪ್ರಯೋಜನ ಪಡೆದುಕೊಂಡು ಸಣ್ಣ ಕೈಗಾರಿಕೆಗಳನ್ನು ವಿಸ್ತರಿಸಲು ಸಹಕಾರಿಯಾಗಲಿದೆ. ಹೂಡಿಕೆ ಮತ್ತು ವಹಿವಾಟು ಮಿತಿಯನ್ನು ಕ್ರಮವಾಗಿ 2.5 ಮತ್ತು 2 ಪಟ್ಟು ಹೆಚ್ಚಿಸುವ ಮೂಲಕ ಸರ್ಕಾರವು ಎಂಎಸ್ಎಂಇ ಬೆಳವಣಿಗೆಗೆ ತನ್ನ ಬದ್ಧತೆ ಪ್ರದರ್ಶಿಸಿದೆ ಎಂದು ಹೇಳಿದ್ದಾರೆ.</p>.<p>ಅತಿಸಣ್ಣ ಮತ್ತು ಸಣ್ಣ ಉದ್ಯಮಗಳಿಗೆ ಕ್ರೆಡಿಟ್ ಗ್ಯಾರಂಟಿಯನ್ನು ₹5 ಕೋಟಿಯಿಂದ ₹10 ಕೋಟಿಗೆ ಹೆಚ್ಚಿಸಿದೆ. ಇದರಿಂದ ಮುಂದಿನ ಐದು ವರ್ಷಗಳಲ್ಲಿ ಈ ವಲಯಕ್ಕೆ ಹೆಚ್ಚುವರಿಯಾಗಿ ₹1.5 ಲಕ್ಷ ಕೋಟಿ ಸಾಲ ದೊರೆಯಲಿದೆ ಎಂದಿದ್ದಾರೆ.</p>.<p>ಜನ ವಿಶ್ವಾಸ್ ಮಸೂದೆ 2.0ರ ಪರಿಚಯಕ್ಕೆ ನಿರ್ಧರಿಸಿರುವುದು ಎಂಎಸ್ಇಗಳ ಮೇಲಿನ ನಿಯಂತ್ರಕ ಹೊರೆಗಳನ್ನು ಕಡಿಮೆ ಮಾಡಲಿದೆ. ಇದು ಹೆಚ್ಚು ವ್ಯಾಪಾರ ಸ್ನೇಹಿ ವಾತಾವರಣ ಸೃಷ್ಟಿಸಲಿದೆ. ಹೂಡಿಕೆಗೆ ಮತ್ತಷ್ಟು ಉತ್ತೇಜನ ನೀಡಲಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅತಿಸಣ್ಣ, ಸಣ್ಣ ಉದ್ಯಮಗಳ (ಎಂಎಸ್ಇ) ಬೆಳವಣಿಗೆಗೆ ಬಜೆಟ್ ಪೂರಕವಾಗಿದೆ. ಇವುಗಳಿಗೆ ಸಾಲ, ಕೌಶಲ ಅಭಿವೃದ್ಧಿ, ನಾವೀನ್ಯ ಮತ್ತು ವ್ಯವಹಾರ ಉತ್ತೇಜನಕ್ಕೆ ಆದ್ಯತೆ ಸಿಕ್ಕಿದೆ’ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಅಧ್ಯಕ್ಷ ಎಂ.ಜಿ. ರಾಜಗೋಪಾಲ್ ಹೇಳಿದ್ದಾರೆ.</p>.<p>ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳ (ಎಂಎಸ್ಎಂಇ) ವರ್ಗೀಕರಣ ಮಾನದಂಡವನ್ನು ಪರಿಷ್ಕರಿಸುವುದು ಒಳ್ಳೆಯ ಸುಧಾರಣೆಯಾಗಿದೆ. ಇದರಿಂದ ಸರ್ಕಾರದ ಪ್ರಯೋಜನ ಪಡೆದುಕೊಂಡು ಸಣ್ಣ ಕೈಗಾರಿಕೆಗಳನ್ನು ವಿಸ್ತರಿಸಲು ಸಹಕಾರಿಯಾಗಲಿದೆ. ಹೂಡಿಕೆ ಮತ್ತು ವಹಿವಾಟು ಮಿತಿಯನ್ನು ಕ್ರಮವಾಗಿ 2.5 ಮತ್ತು 2 ಪಟ್ಟು ಹೆಚ್ಚಿಸುವ ಮೂಲಕ ಸರ್ಕಾರವು ಎಂಎಸ್ಎಂಇ ಬೆಳವಣಿಗೆಗೆ ತನ್ನ ಬದ್ಧತೆ ಪ್ರದರ್ಶಿಸಿದೆ ಎಂದು ಹೇಳಿದ್ದಾರೆ.</p>.<p>ಅತಿಸಣ್ಣ ಮತ್ತು ಸಣ್ಣ ಉದ್ಯಮಗಳಿಗೆ ಕ್ರೆಡಿಟ್ ಗ್ಯಾರಂಟಿಯನ್ನು ₹5 ಕೋಟಿಯಿಂದ ₹10 ಕೋಟಿಗೆ ಹೆಚ್ಚಿಸಿದೆ. ಇದರಿಂದ ಮುಂದಿನ ಐದು ವರ್ಷಗಳಲ್ಲಿ ಈ ವಲಯಕ್ಕೆ ಹೆಚ್ಚುವರಿಯಾಗಿ ₹1.5 ಲಕ್ಷ ಕೋಟಿ ಸಾಲ ದೊರೆಯಲಿದೆ ಎಂದಿದ್ದಾರೆ.</p>.<p>ಜನ ವಿಶ್ವಾಸ್ ಮಸೂದೆ 2.0ರ ಪರಿಚಯಕ್ಕೆ ನಿರ್ಧರಿಸಿರುವುದು ಎಂಎಸ್ಇಗಳ ಮೇಲಿನ ನಿಯಂತ್ರಕ ಹೊರೆಗಳನ್ನು ಕಡಿಮೆ ಮಾಡಲಿದೆ. ಇದು ಹೆಚ್ಚು ವ್ಯಾಪಾರ ಸ್ನೇಹಿ ವಾತಾವರಣ ಸೃಷ್ಟಿಸಲಿದೆ. ಹೂಡಿಕೆಗೆ ಮತ್ತಷ್ಟು ಉತ್ತೇಜನ ನೀಡಲಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>