ಬೆಂಗಳೂರು: ಆರ್ಥಿಕ ಪ್ರಗತಿ ಉತ್ತೇಜನದ ಜತೆಗೆ ವಿವಿಧ ಸಾಮಾಜಿಕ ಕಲ್ಯಾಣ, ಆರೋಗ್ಯ ಯೋಜನೆಗಳನ್ನು ಪ್ರಸ್ತುತ ಬಜೆಟ್ನಲ್ಲಿ ಹಣಕಾಸು ಸಚಿವರು ಘೋಷಿಸಿದ್ದಾರೆ. ಅದರ ಜತೆಗೆ ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅತ್ಯಂತ ಮಹತ್ವದ ಯೋಜನೆಯೊಂದನ್ನು ಪ್ರಕಟಿಸಿದ್ದಾರೆ. ಅಂದರೆ, ಇನ್ನು ದೇಶಾದ್ಯಂತ ಒಂದೇ ಪಡಿತರ ಕಾರ್ಡ್ ಯೋಜನೆ ಜಾರಿಗೆ ಬರಲಿದೆ. ಶೀಘ್ರದಲ್ಲೇ 32 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೊಸ ಪಡಿತರ ವ್ಯವಸ್ಥೆ ಬರಲಿದೆ.