ಉತ್ಪನ್ನಗಳು ಮತ್ತು ಸೇವೆಗಳಿಗೆ ಬೇಡಿಕೆ ಸೃಷ್ಟಿಸುವತ್ತ ಗಮನ ನೀಡಲು ಇದು ಸಕಾಲ. ಇಲ್ಲದಿದ್ದರೆ ಈಗ ಕಾಣುತ್ತಿರುವ ಚೇತರಿಕೆಯು ಚೈತನ್ಯ ಕಳೆದುಕೊಳ್ಳುತ್ತದೆ. ಪೂರೈಕೆ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಸರಿಪಡಿಸಲು ಗಮನ ನೀಡಿದ್ದರಲ್ಲಿ ಯಾವ ತಪ್ಪೂ ಇಲ್ಲ. ಆದರೆ, ಉತ್ಪನ್ನಗಳು ಮತ್ತು ಸೇವೆಗಳಿಗೆ ಬೇಡಿಕೆ ಅಗತ್ಯ ಪ್ರಮಾಣದಲ್ಲಿ ಇಲ್ಲದಿದ್ದರೆ ಆರ್ಥಿಕ ಚೇತರಿಕೆಗೆ ಅಡ್ಡಿಯಾಗುತ್ತದೆ ಎಂದು ಸುನಿಲ್ ಕುಮಾರ್ ಸಿನ್ಹಾ ಅವರು ವರದಿಯಲ್ಲಿ ಹೇಳಿದ್ದಾರೆ.