ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ರಾಜ್ಯ ಬಜೆಟ್ ಮಂಡಿಸುವುದು ಈ ಬಾರಿ ಸವಾಲಿನ ಕೆಲಸವಾಗಿದೆ. ಜನಸಾಮಾನ್ಯರಿಗೆ ಅಗತ್ಯವಾದ ಪ್ರಮುಖ ಯೋಜನೆಗಳನ್ನು ಕೈಬಿಡದೆ ಮುಂದುವರಿಸಬೇಕಿದೆ. ಸಾಧ್ಯತೆಗಳನ್ನು ನೋಡಿಕೊಂಡು ಹೊಸ ಯೋಜನೆಗಳನ್ನು ಜಾರಿಗೊಳಿಸಲು ಮುಖ್ಯಮಂತ್ರಿಯವರು ಬಜೆಟ್ ಲೆಕ್ಕಾಚಾರ ಮಾಡುತ್ತಿದ್ದಾರೆ’ ಎಂದರು.