<p><strong>ಬೆಂಗಳೂರು:</strong> ಭಾರಿ ಪ್ರಮಾಣದ ವಿತ್ತೀಯ ಕೊರತೆಯನ್ನು ಹೊಂದಿರುವ ಕೇಂದ್ರ ಸರ್ಕಾರದ ಬಜೆಟ್, ದೇಶದ ಜನರ ಶೋಷಣೆಗೆ ಕಾರಣವಾಗಲಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.</p>.<p>ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಅವರು, ‘2021ರಲ್ಲಿ ಶೇಕಡ 9.5 ಮತ್ತು 2022ರಲ್ಲಿ ಶೇ 6.8ರಷ್ಟು ವಿತ್ತೀಯ ಕೊರತೆ ಇರಲಿದೆ ಎಂದು ವಿತ್ತ ಸಚಿವೆ ಪ್ರಕಟಿಸಿದ್ದಾರೆ. ಈ ಕೊರತೆಯನ್ನು ತುಂಬಲು ಸರ್ಕಾರ ಬ್ಯಾಂಕ್ಗಳ ಸಂಪನ್ಮೂಲಕ್ಕೆ ಕೈ ಹಾಕುತ್ತದೆ. ಅದು ಜನರ ಶೋಷಣೆಗೆ ಕಾರಣವಾಗುತ್ತದೆ’ ಎಂದಿದ್ದಾರೆ.</p>.<p>ಕೃಷಿ ಸೆಸ್ ಹಣವನ್ನು ಹೇಗೆ ಬಳಸಲಾಗುತ್ತದೆ ಎಂಬ ಉಲ್ಲೇಖವೇ ಇಲ್ಲ. ₹ 12 ಲಕ್ಷ ಕೋಟಿ ಸಾಲ ಪಡೆಯುವ ಪ್ರಸ್ತಾವವಿದ್ದು, ಅದಕ್ಕೆ ಸಮರ್ಥನೆಗಳನ್ನೇ ಒದಗಿಸಿಲ್ಲ. ದೇಶದ 130 ಕೋಟಿ ಜನರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡುವುದಕ್ಕೆ ಅನುದಾನವನ್ನೇ ಒದಗಿಸಿಲ್ಲ. ಈ ಕುರಿತು ಬಣ್ಣನೆಯ ಮಾತುಗಳಷ್ಟೇ ಬಜೆಟ್ನಲ್ಲಿ ಇವೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.</p>.<p>ಎಲ್ಲ ದರಗಳನ್ನೂ ಏರಿಸಿರುವ ಕೇಂದ್ರ ಸರ್ಕಾರ, ‘ಆತ್ಮನಿರ್ಭರ ಭಾರತ’ ರೂಪಿಸುವ ಬಜೆಟ್ ಎಂಬುದಾಗಿ ಆತ್ಮವಂಚನೆಯ ಮಾತುಗಳನ್ನಾಡುತ್ತಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಭಾರಿ ಪ್ರಮಾಣದ ವಿತ್ತೀಯ ಕೊರತೆಯನ್ನು ಹೊಂದಿರುವ ಕೇಂದ್ರ ಸರ್ಕಾರದ ಬಜೆಟ್, ದೇಶದ ಜನರ ಶೋಷಣೆಗೆ ಕಾರಣವಾಗಲಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.</p>.<p>ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಅವರು, ‘2021ರಲ್ಲಿ ಶೇಕಡ 9.5 ಮತ್ತು 2022ರಲ್ಲಿ ಶೇ 6.8ರಷ್ಟು ವಿತ್ತೀಯ ಕೊರತೆ ಇರಲಿದೆ ಎಂದು ವಿತ್ತ ಸಚಿವೆ ಪ್ರಕಟಿಸಿದ್ದಾರೆ. ಈ ಕೊರತೆಯನ್ನು ತುಂಬಲು ಸರ್ಕಾರ ಬ್ಯಾಂಕ್ಗಳ ಸಂಪನ್ಮೂಲಕ್ಕೆ ಕೈ ಹಾಕುತ್ತದೆ. ಅದು ಜನರ ಶೋಷಣೆಗೆ ಕಾರಣವಾಗುತ್ತದೆ’ ಎಂದಿದ್ದಾರೆ.</p>.<p>ಕೃಷಿ ಸೆಸ್ ಹಣವನ್ನು ಹೇಗೆ ಬಳಸಲಾಗುತ್ತದೆ ಎಂಬ ಉಲ್ಲೇಖವೇ ಇಲ್ಲ. ₹ 12 ಲಕ್ಷ ಕೋಟಿ ಸಾಲ ಪಡೆಯುವ ಪ್ರಸ್ತಾವವಿದ್ದು, ಅದಕ್ಕೆ ಸಮರ್ಥನೆಗಳನ್ನೇ ಒದಗಿಸಿಲ್ಲ. ದೇಶದ 130 ಕೋಟಿ ಜನರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡುವುದಕ್ಕೆ ಅನುದಾನವನ್ನೇ ಒದಗಿಸಿಲ್ಲ. ಈ ಕುರಿತು ಬಣ್ಣನೆಯ ಮಾತುಗಳಷ್ಟೇ ಬಜೆಟ್ನಲ್ಲಿ ಇವೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.</p>.<p>ಎಲ್ಲ ದರಗಳನ್ನೂ ಏರಿಸಿರುವ ಕೇಂದ್ರ ಸರ್ಕಾರ, ‘ಆತ್ಮನಿರ್ಭರ ಭಾರತ’ ರೂಪಿಸುವ ಬಜೆಟ್ ಎಂಬುದಾಗಿ ಆತ್ಮವಂಚನೆಯ ಮಾತುಗಳನ್ನಾಡುತ್ತಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>