ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಬಜೆಟ್‌ 2020: ರಾಜ್ಯಕ್ಕೆ ₹ 9 ಸಾವಿರ ಕೋಟಿ ಖೋತಾ

Last Updated 1 ಫೆಬ್ರುವರಿ 2020, 20:15 IST
ಅಕ್ಷರ ಗಾತ್ರ

ಬೆಂಗಳೂರು: ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯದ ಗಾಯದ ಮೇಲೆ ಬರೆ ಎಂಬಂತೆ, ಕೇಂದ್ರೀಯತೆರಿಗೆಯಲ್ಲಿ ದೊರೆಯುವ ಪಾಲಿನಲ್ಲೂ ₹ 9 ಸಾವಿರ ಕೋಟಿಯಷ್ಟು ಕಡಿತವಾಗುವ ಆತಂಕ ಎದುರಾಗಿದೆ. ಇದು ರಾಜ್ಯದ 2020–21ನೇ ಸಾಲಿನ ಬಜೆಟ್‌ ತಯಾರಿಯ ಮೇಲೆ ಭಾರಿ ದುಷ್ಪರಿಣಾಮ ಬೀರಲಿದೆ.

ರಾಜ್ಯ ಕಳೆದುಕೊಳ್ಳಬಹುದಾದ ಕೇಂದ್ರದ ಪಾಲು ಎಷ್ಟು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅದು ₹ 11 ಸಾವಿರ ಕೋಟಿಯವರೆಗೂ ಏರಬಹುದು ಎಂದೂ ಹೇಳಲಾಗುತ್ತಿದೆ.

‘ಈ ಬಾರಿ ರಾಜ್ಯ ಪಡೆಯುವ ಪಾಲಿನಲ್ಲಿ ₹ 9 ಸಾವಿರದಷ್ಟು ಕಡಿಮೆಯಾಗುವ ಸಾಧ್ಯತೆಯಂತೂ ಇದೆ’ ಎಂದು ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್‌.ಎನ್‌.ಪ್ರಸಾದ್‌ಹೇಳಿದರು.

ಜಿಎಸ್‌ಟಿ ಸಂಗ್ರಹ ಸಮರ್ಪಕವಾಗಿ ಆಗದ ಕಾರಣ ಕೇಂದ್ರದಿಂದ ರಾಜ್ಯಕ್ಕೆ ಪರಿಹಾರ ರೂಪದಲ್ಲಿ ಸಿಗಬೇಕಾದ ಹಣದಲ್ಲಿ ಕಡಿತ ಉಂಟಾಗಿದೆ. ಅದು ರಾಜ್ಯದ ಚಿಂತೆ ಹೆಚ್ಚಿಸಿರುವಂತೆಯೇ ಕೇಂದ್ರೀಯ ತೆರಿಗೆಯ ಪಾಲಿಗೂ ಸಂಚಕಾರ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT