Karnataka Budget: ಬೊಮ್ಮಾಯಿ ಬಜೆಟ್ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
2022–23ನೇ ಸಾಲಿನ ಹಾಗೂ ತಮ್ಮ ಚೊಚ್ಚಲ ಬಜೆಟ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಿದರು. ಪ್ರಗತಿಯ ಮುನ್ನೋಟವೆಂದೇ ಬಿಂಬಿಸಲಾಗಿದ್ದ ಬಜೆಟ್ನ ಮುಖ್ಯಾಂಶಗಳು ಇಲ್ಲಿವೆ;
* 2024ರ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ಗೆ ರಾಜ್ಯದಿಂದ ಕನಿಷ್ಠ 75 ಕ್ರೀಡಾಪಟುಗಳನ್ನು ಸಿದ್ಧಪಡಿಸಲು ‘ಅಮೃತ ಕ್ರೀಡಾ ದತ್ತು ಯೋಜನೆ’ಯಡಿ ತಲಾ ₹10 ಲಕ್ಷದವರೆಗೆ ಪ್ರತಿ ವರ್ಷ ಶ್ರೇಷ್ಠ ಮಟ್ಟದ ತರಬೇತಿ ಪಡೆಯಲು ವಿನಿಯೋಗಿಸುವುದಾಗಿ ಘೋಷಣೆ
* ರಾಯಚೂರಿನಲ್ಲಿ ₹186 ಕೋಟಿ ವೆಚ್ಚದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ
* ವೀರಶೈವ ಲಿಂಗಾಯತ, ಒಕ್ಕಲಿಗ ಅಭಿವೃದ್ಧಿ ನಿಗಮಗಳಿಗೆ ತಲಾ ₹100 ಕೋಟಿ ಯೋಜನೆ
* ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ ನಾರಾಯಣ ಗುರು ವಸತಿ ಶಾಲೆ ಪ್ರಾರಂಭಕ್ಕೆ ನಿರ್ಧಾರ
* ಪ್ರವಾಸೋದ್ಯಮಕ್ಕೆ ಆದ್ಯತೆ: ಜೋಗ, ನಂದಿ ಬೆಟ್ಟ, ಯಾಣದಲ್ಲಿ ರೋಪ್ವೇಗೆ ಅನುದಾನ
ಇದನ್ನೂ ಓದಿ: ಕರ್ನಾಟಕ ಬಜೆಟ್: ಪ್ರವಾಸೋದ್ಯಮಕ್ಕೆ ಆದ್ಯತೆ; ಜೋಗ, ನಂದಿ ಬೆಟ್ಟದಲ್ಲಿ ರೋಪ್ವೇ
* 2022–23ನೇ ಸಾಲಿನಲ್ಲಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ. 7 ಹೊಸ ವಿಶ್ವವಿದ್ಯಾಲಯಗಳ ಸ್ಥಾಪಿಸುವುದಾಗಿ ಘೋಷಣೆ
* ಕೆಪಿಎಸ್ಸಿ, ಯುಪಿಎಸ್ಸಿ, ಎಸ್ಎಸ್ಸಿ, ಬ್ಯಾಂಕಿಂಗ್, ರೈಲ್ವೆ, ಸಿಡಿಎಸ್, ನೀಟ್, ಜೆಇಇ ಮುಂತಾದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸರ್ಕಾರದ ವತಿಯಿಂದ ಆನ್ಲೈನ್ ಕೋಚಿಂಗ್
* 2022-23ರ ಸಾಲಿನಲ್ಲಿ ಯಾವುದೇ ತೆರಿಗೆ ಹೆಚ್ಚಳ ಇಲ್ಲ; ಬೆಲೆ ಏರಿಕೆಯೂ ಇಲ್ಲ
* ಬೆಂಗಳೂರಿನ ಗೊರಗುಂಟೆಪಾಳ್ಯ ಜಂಕ್ಷನ್ನಲ್ಲಿ ಸಿಗ್ನಲ್ ಮುಕ್ತ ವಾಹನ ಸಂಚಾರಕ್ಕೆ ಬಿಬಿಎಂಪಿ, ಬಿಡಿಎ ಮತ್ತು ಎನ್ಎಚ್ಎಐ ವತಿಯಿಂದ ಗ್ರೇಡ್ ಸೆಪರೇಟರ್ ಮತ್ತು ಮೇಲು ಸೇತುವೆ ಕಾಮಗಾರಿ.
ಬಜೆಟ್ನ ಲೈವ್ ಅಪ್ಡೇಟ್ಗೆ ಕ್ಲಿಕ್ ಮಾಡಿ: Karnataka Budget Live Updates: ಯಾವುದೇ ತೆರಿಗೆ ಹೆಚ್ಚಳ ಇಲ್ಲ
* ಅಮೃತ್ ನಗರೋತ್ಥಾನ ಯೋಜನೆ: ಬೆಂಗಳೂರು ನಗರದ ಮೂಲಭೂತ ಸೌಕರ್ಯಕ್ಕಾಗಿ 3 ವರ್ಷಗಳಲ್ಲಿ ₹6,000 ಕೋಟಿ
* ₹11,250 ಕೋಟಿ ವೆಚ್ಚದ ನಮ್ಮ ಮೆಟ್ರೊ ಹಂತ–3 ಯೋಜನೆ ಜಾರಿಗೆ ಕೇಂದ್ರಕ್ಕೆ ಡಿ.ಪಿ.ಆರ್ ಸಲ್ಲಿಕೆ
* ಎಲ್ಲ ವರ್ಗದವರ ಅಭಿವೃದ್ಧಿಗಾಗಿ ಬಜೆಟ್ನಲ್ಲಿ ಪಂಚ ಸೂತ್ರಗಳ ಘೋಷಣೆ.
ಇದನ್ನೂ ಓದಿ: ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
* ಮೇಕದಾಟು ಯೋಜನೆಗೆ ₹1,000 ಕೋಟಿ ಅನುದಾನ
* ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ₹20 ಕೋಟಿ ಅನುದಾನ
* ಕಾಸರಗೋಡು, ಅಕ್ಕಲಕೋಟೆ ಮತ್ತು ಗೋವಾದಲ್ಲಿ ಕನ್ನಡ ಭವನ ಸ್ಥಾಪನೆ ಘೋಷಣೆ
ಇದನ್ನೂ ಓದಿ: ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ
* ರಾಜ್ಯದಿಂದ ಕಾಶಿ ಯಾತ್ರೆಯನ್ನು ಕೈಗೊಳ್ಳುವ ಸುಮಾರು 30,000 ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ ₹5,000 ಸಹಾಯಧನ ಘೋಷಣೆ
* ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ಮರವತ್ತೂರು ಇನ್ನಿತರ ಸ್ಥಳಗಳಿಗೆ ಪ್ಯಾಕೇಜ್ ಟ್ರಿಪ್ ಸೇವೆ ಪ್ರಾರಂಭಿಸುವ ಘೋಷಣೆ
ಇದನ್ನೂ ಓದಿ: ಕಾಶಿ ಯಾತ್ರೆಗೆ ಸಹಾಯಧನ: ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಪ್ಯಾಕೇಜ್ ಟ್ರಿಪ್
* ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ನಡೆಸಲು ಅಸ್ತು
* ಸಂಸ್ಕೃತಿ, ಸುಧಾರಣೆ ಮತ್ತು ಸಾರ್ವಜನಿಕ ಸೇವೆಗೆ ₹56,710 ಕೋಟಿ ಅನುದಾನ
* ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆಗಾಗಿ ಬೆಂಗಳೂರು ಮತ್ತು ರಾಜ್ಯದ ಇತರ ಪ್ರಮುಖ ನಗರಗಳಲ್ಲಿ 438 ‘ನಮ್ಮ ಕ್ಲಿನಿಕ್‘ಗಳನ್ನು ಸ್ಥಾಪನೆ
* ಮಹಿಳೆಯರ ಆರೋಗ್ಯ ಸಮಸ್ಯೆಗಳಿಗೆ ಸಲಹೆ ನೀಡಲು 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ
* ಎಲ್ಲರಿಗೂ ಆರೋಗ್ಯ, ಎಲ್ಲೆಡೆ ಆರೋಗ್ಯ: ಬೆಳಗಾವಿಯಲ್ಲಿ ₹50 ಕೋಟಿ ವೆಚ್ಚದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ
* ‘ರೈತ ಶಕ್ತಿ’ ನೂತನ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಳಕೆ ಉತ್ತೇಜನಕ್ಕೆ ಪ್ರತಿ ಎಕರೆಗೆ ₹250ರಂತೆ ಡೀಸೆಲ್ ಸಹಾಯಧನ: ₹600 ಕೋಟಿ ಅನುದಾನ.
* ಮಕ್ಕಳ ಅಭ್ಯುದಯಕ್ಕೆ ₹40,944 ಕೋಟಿ ಘೋಷಣೆ
* ಮಹಿಳೆಯರ ಅಭಿವೃದ್ಧಿಗೆ ₹43,188 ಕೋಟಿ ಘೋಷಣೆ
* ರಾಜ್ಯದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹ ಹೆಚ್ಚಳ: ಬೊಮ್ಮಾಯಿ
* ಕೃಷಿ ಕ್ಷೇತ್ರಕ್ಕೆ ₹33,700 ಕೋಟಿ ಘೋಷಣೆ
* ಬೆಂಗಳೂರು ಅಭಿವೃದ್ಧಿಗೆ ₹8,409 ಕೋಟಿ ಕೊಡುಗೆ
* 2022–23ನೇ ಸಾಲಿನ ಬಜೆಟ್ ಗಾತ್ರ ₹2,65,720 ಕೋಟಿ
* ಶಿಕ್ಷಣ, ಉದ್ಯೋಗ, ಸಬಲೀಕರಣಕ್ಕೆ ಆದ್ಯತೆ ನಿಡಿರುವ ಬಜೆಟ್ ಇದು: ಬೊಮ್ಮಾಯಿ
* ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 'ಪುಣ್ಯಕೋಟಿ ದತ್ತು ಯೋಜನೆ' ಆರಂಭಿಸಲಾಗುವುದು –ಬಸವರಾಜ ಬೊಮ್ಮಾಯಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.