<p><strong>ಬೆಂಗಳೂರು</strong>: ರಾಜ್ಯ ಸರ್ಕಾರದ ಸಾಲವನ್ನು ಟೀಕಿಸುವ ಬಿಜೆಪಿ ಮುಖಂಡರು ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಕೇಂದ್ರ ಸರ್ಕಾರ 2025–26ನೇ ಸಾಲಿನಲ್ಲಿ ಮಾಡುತ್ತಿರುವ ₹15.04 ಲಕ್ಷ ಕೋಟಿ ಸಾಲದ ಬಗ್ಗೆಯೂ ಏಕೆ ಧ್ವನಿ ಎತ್ತುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. </p>.<p>ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜ್ಯ ಸರ್ಕಾರ ಈ ವರ್ಷ ಉದ್ದೇಶಿಸಿರುವ ಒಟ್ಟು ಸಾಲ ₹1.16 ಲಕ್ಷ ಕೋಟಿ. ಇದು ಕೇಂದ್ರ ಸರ್ಕಾರ ಹಾಗೂ ಆರ್ಬಿಐ ರೂಪಿಸಿದ ನಿಯಮಕ್ಕೆ ಅನುಗುಣವಾಗಿಯೇ ಇದೆ. ನಿಯಮದಂತೆ ಬಜೆಟ್ ಗಾತ್ರದ ಶೇ 25 ಮೀರಬಾರದು. ರಾಜ್ಯದ ಸಾಲ ಶೇ 24.95 ಇದೆ. ಕಳೆದ ಸಾಲಿಗೆ ಹೋಲಿಸಿದರೆ ₹10 ಸಾವಿರ ಕೋಟಿಯಷ್ಟೇ ಹೆಚ್ಚುವರಿ ಸಾಲ ಮಾಡಲಾಗುತ್ತಿದೆ ಎಂದು ವಿವರ ನೀಡಿದರು.</p>.<p>2025-26ನೇ ಸಾಲಿನ ಕೇಂದ್ರ ಬಜೆಟ್ ಗಾತ್ರ ₹50.65 ಲಕ್ಷ ಕೋಟಿ. ಇದೇ ಬಜೆಟ್ನಲ್ಲಿ ತೋರಿಸಿರುವ ಸಾಲ ಹಾಗೂ ಕೇಂದ್ರದ ಒಟ್ಟು ಸಾಲ ಶೇ 56 ದಾಟುತ್ತದೆ. ರಾಜಕೀಯ ಕಾರಣಗಳಿಗಾಗಿ ಟೀಕಿಸುವ ಬದಲು ವಿರೋಧ ಪಕ್ಷದ ನಾಯಕರು ವಸ್ತುಸ್ಥಿತಿಯತ್ತ ಗಮನಹರಿಸಬೇಕು ಎಂದರು. </p>.<p>ಈ ಬಾರಿಯ ಆಯವ್ಯಯದಲ್ಲಿ ವಿತ್ತೀಯ ಶಿಸ್ತು ಪಾಲಿಸಲಾಗಿದೆ. ಬಡವರ, ಮಹಿಳೆಯರ, ಶೋಷಿತರ, ದುರ್ಬಲ ವರ್ಗದವರ ಅಭಿವೃದ್ಧಿಗೆ ಜನಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಕಡಿಮೆ ತೆರಿಗೆಯ ಮಿತಿಯಲ್ಲೇ ಎಲ್ಲ ವರ್ಗದ ಜನರ ಹಿತಾಸಕ್ತಿಗೆ ಆದ್ಯತೆ ನೀಡಲಾಗಿದೆ ಎಂದರು.</p>.<p>ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಗ್ಯಾರಂಟಿಗಳಿಗೆ ಹಣವಿಲ್ಲ ಎಂಬ ಅಪಪ್ರಚಾರಕ್ಕೆ ತಲೆಕೆಡಿಸಿಕೊಳ್ಳದೆ ಇರುವ ಸಂಪನ್ಮೂಲಗಳ ಇತಿಮಿತಿಯಲ್ಲೇ ಬಜೆಟ್ ಮಂಡಿಸಲಾಗಿದೆ. ಸಾಮಾನ್ಯ ಜನರ ನೆಮ್ಮದಿಯ ಬದುಕಿಗೆ ಗ್ಯಾರಂಟಿ ನೆಮ್ಮದಿ ಮೂಡಿಸಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯ ಸರ್ಕಾರದ ಸಾಲವನ್ನು ಟೀಕಿಸುವ ಬಿಜೆಪಿ ಮುಖಂಡರು ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಕೇಂದ್ರ ಸರ್ಕಾರ 2025–26ನೇ ಸಾಲಿನಲ್ಲಿ ಮಾಡುತ್ತಿರುವ ₹15.04 ಲಕ್ಷ ಕೋಟಿ ಸಾಲದ ಬಗ್ಗೆಯೂ ಏಕೆ ಧ್ವನಿ ಎತ್ತುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. </p>.<p>ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜ್ಯ ಸರ್ಕಾರ ಈ ವರ್ಷ ಉದ್ದೇಶಿಸಿರುವ ಒಟ್ಟು ಸಾಲ ₹1.16 ಲಕ್ಷ ಕೋಟಿ. ಇದು ಕೇಂದ್ರ ಸರ್ಕಾರ ಹಾಗೂ ಆರ್ಬಿಐ ರೂಪಿಸಿದ ನಿಯಮಕ್ಕೆ ಅನುಗುಣವಾಗಿಯೇ ಇದೆ. ನಿಯಮದಂತೆ ಬಜೆಟ್ ಗಾತ್ರದ ಶೇ 25 ಮೀರಬಾರದು. ರಾಜ್ಯದ ಸಾಲ ಶೇ 24.95 ಇದೆ. ಕಳೆದ ಸಾಲಿಗೆ ಹೋಲಿಸಿದರೆ ₹10 ಸಾವಿರ ಕೋಟಿಯಷ್ಟೇ ಹೆಚ್ಚುವರಿ ಸಾಲ ಮಾಡಲಾಗುತ್ತಿದೆ ಎಂದು ವಿವರ ನೀಡಿದರು.</p>.<p>2025-26ನೇ ಸಾಲಿನ ಕೇಂದ್ರ ಬಜೆಟ್ ಗಾತ್ರ ₹50.65 ಲಕ್ಷ ಕೋಟಿ. ಇದೇ ಬಜೆಟ್ನಲ್ಲಿ ತೋರಿಸಿರುವ ಸಾಲ ಹಾಗೂ ಕೇಂದ್ರದ ಒಟ್ಟು ಸಾಲ ಶೇ 56 ದಾಟುತ್ತದೆ. ರಾಜಕೀಯ ಕಾರಣಗಳಿಗಾಗಿ ಟೀಕಿಸುವ ಬದಲು ವಿರೋಧ ಪಕ್ಷದ ನಾಯಕರು ವಸ್ತುಸ್ಥಿತಿಯತ್ತ ಗಮನಹರಿಸಬೇಕು ಎಂದರು. </p>.<p>ಈ ಬಾರಿಯ ಆಯವ್ಯಯದಲ್ಲಿ ವಿತ್ತೀಯ ಶಿಸ್ತು ಪಾಲಿಸಲಾಗಿದೆ. ಬಡವರ, ಮಹಿಳೆಯರ, ಶೋಷಿತರ, ದುರ್ಬಲ ವರ್ಗದವರ ಅಭಿವೃದ್ಧಿಗೆ ಜನಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಕಡಿಮೆ ತೆರಿಗೆಯ ಮಿತಿಯಲ್ಲೇ ಎಲ್ಲ ವರ್ಗದ ಜನರ ಹಿತಾಸಕ್ತಿಗೆ ಆದ್ಯತೆ ನೀಡಲಾಗಿದೆ ಎಂದರು.</p>.<p>ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಗ್ಯಾರಂಟಿಗಳಿಗೆ ಹಣವಿಲ್ಲ ಎಂಬ ಅಪಪ್ರಚಾರಕ್ಕೆ ತಲೆಕೆಡಿಸಿಕೊಳ್ಳದೆ ಇರುವ ಸಂಪನ್ಮೂಲಗಳ ಇತಿಮಿತಿಯಲ್ಲೇ ಬಜೆಟ್ ಮಂಡಿಸಲಾಗಿದೆ. ಸಾಮಾನ್ಯ ಜನರ ನೆಮ್ಮದಿಯ ಬದುಕಿಗೆ ಗ್ಯಾರಂಟಿ ನೆಮ್ಮದಿ ಮೂಡಿಸಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>