<p><strong>ನವದೆಹಲಿ: </strong>ಶುದ್ಧ ಕುಡಿಯುವ ನೀರು, ನೈರ್ಮಲ್ಯ ಮತ್ತು ಮಾಲಿನ್ಯವಿಲ್ಲದ ಪರಿಸರವು ಸಾರ್ವತ್ರಿಕ ಆರೋಗ್ಯವನ್ನು ಸಾಧಿಸುವಲ್ಲಿ ಅತ್ಯಂತ ಮಹತ್ವದ ಪಾತ್ರವಹಿಸುತ್ತವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು ಪದೇ ಪದೇ ಒತ್ತಿ ಹೇಳುತ್ತಿದೆ ಎಂಬುದನ್ನು ನಿರ್ಮಲಾ ಸೀತಾರಾಮನ್ ಉಲ್ಲೇಖಿಸಿದ್ದಾರೆ.</p>.<p>ಈ ನಿಟ್ಟಿನಲ್ಲಿ 4,378 ನಗರ ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯ 2.86 ಕೋಟಿ ಮನೆಗಳಿಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ‘ಜಲ ಜೀವನ್ ಮಿಷನ್(ನಗರ)’ ಯೋಜನೆ ಅನುಷ್ಠಾನಕ್ಕಾಗಿ ಈ ಸಾಲಿನಲ್ಲಿ ₹50 ಸಾವಿರ ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.</p>.<p>ಅಟಲ್ ನಗರಗಳ ಪುನರ್ ನವೀಕರಣ ಮತ್ತು ನಗರ ಸುಧಾರಣೆ ಯೋಜನೆಯಡಿಯ (ಎಎಂಆರ್ಯುಟಿ) 500 ನಗರಗಳಲ್ಲಿ ದ್ರವ ತ್ಯಾಜ್ಯ ನಿರ್ವಹಣೆ ಐದು ವರ್ಷಗಳಲ್ಲಿ ಜಾರಿಗೆ ಬರಲಿದೆ ಎಂದು ಘೋಷಿಸಿದ್ದಾರೆ.</p>.<p>ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿ ಹೆಚ್ಚಳ: ಮುಂದಿನ ಹಣಕಾಸು ವರ್ಷದಲ್ಲಿ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯನ್ನು ₹30,000 ಕೋಟಿಯಿಂದ ₹40,000 ಕೋಟಿಗೆ ಹೆಚ್ಚಿಸಲಾಗಿದೆ.</p>.<p><strong>ನರೇಗಾ: </strong>ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2020–21ನೇ ಸಾಲಿನಲ್ಲಿ ₹1,11,500 ಕೋಟಿ ಹಂಚಿಕೆ ಮಾಡಿದ್ದು, 2021–22ನೇ ಸಾಲಿಗೆ ₹73,000 ಕೋಟಿ ನೀಡಲಾಗಿದೆ. ಇದರಿಂದಾಗಿ, ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಕಲ್ಪಿಸಲು ಅನುಕೂಲವಾಗಲಿದೆ ಎಂದು ವಿವರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಶುದ್ಧ ಕುಡಿಯುವ ನೀರು, ನೈರ್ಮಲ್ಯ ಮತ್ತು ಮಾಲಿನ್ಯವಿಲ್ಲದ ಪರಿಸರವು ಸಾರ್ವತ್ರಿಕ ಆರೋಗ್ಯವನ್ನು ಸಾಧಿಸುವಲ್ಲಿ ಅತ್ಯಂತ ಮಹತ್ವದ ಪಾತ್ರವಹಿಸುತ್ತವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು ಪದೇ ಪದೇ ಒತ್ತಿ ಹೇಳುತ್ತಿದೆ ಎಂಬುದನ್ನು ನಿರ್ಮಲಾ ಸೀತಾರಾಮನ್ ಉಲ್ಲೇಖಿಸಿದ್ದಾರೆ.</p>.<p>ಈ ನಿಟ್ಟಿನಲ್ಲಿ 4,378 ನಗರ ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯ 2.86 ಕೋಟಿ ಮನೆಗಳಿಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ‘ಜಲ ಜೀವನ್ ಮಿಷನ್(ನಗರ)’ ಯೋಜನೆ ಅನುಷ್ಠಾನಕ್ಕಾಗಿ ಈ ಸಾಲಿನಲ್ಲಿ ₹50 ಸಾವಿರ ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.</p>.<p>ಅಟಲ್ ನಗರಗಳ ಪುನರ್ ನವೀಕರಣ ಮತ್ತು ನಗರ ಸುಧಾರಣೆ ಯೋಜನೆಯಡಿಯ (ಎಎಂಆರ್ಯುಟಿ) 500 ನಗರಗಳಲ್ಲಿ ದ್ರವ ತ್ಯಾಜ್ಯ ನಿರ್ವಹಣೆ ಐದು ವರ್ಷಗಳಲ್ಲಿ ಜಾರಿಗೆ ಬರಲಿದೆ ಎಂದು ಘೋಷಿಸಿದ್ದಾರೆ.</p>.<p>ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿ ಹೆಚ್ಚಳ: ಮುಂದಿನ ಹಣಕಾಸು ವರ್ಷದಲ್ಲಿ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯನ್ನು ₹30,000 ಕೋಟಿಯಿಂದ ₹40,000 ಕೋಟಿಗೆ ಹೆಚ್ಚಿಸಲಾಗಿದೆ.</p>.<p><strong>ನರೇಗಾ: </strong>ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2020–21ನೇ ಸಾಲಿನಲ್ಲಿ ₹1,11,500 ಕೋಟಿ ಹಂಚಿಕೆ ಮಾಡಿದ್ದು, 2021–22ನೇ ಸಾಲಿಗೆ ₹73,000 ಕೋಟಿ ನೀಡಲಾಗಿದೆ. ಇದರಿಂದಾಗಿ, ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಕಲ್ಪಿಸಲು ಅನುಕೂಲವಾಗಲಿದೆ ಎಂದು ವಿವರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>