ಬೆಂಗಳೂರು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಕೇಂದ್ರ ಬಜೆಟ್ 2022–23 ಮಂಡಿಸಿದ್ದಾರೆ.
ಈ ಸಂದರ್ಭದಲ್ಲಿ ಅವರು ಮಹಾಭಾರತದ ಸಾಲೊಂದನ್ನು ಉಲ್ಲೇಖಿಸಿ, ಬಜೆಟ್ ಭಾಷಣ ಮಾಡಿದ್ದಾರೆ.
ಮಹಾಭಾರತದ ಶಾಂತಿ ಪರ್ವವನ್ನು ಉಲ್ಲೇಖಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಧರ್ಮದ ಹಾದಿಯಲ್ಲಿ ಸರ್ಕಾರವನ್ನು ನಡೆಸುವ ದೊರೆ, ಪ್ರಜೆಗಳ ಕಲ್ಯಾಣಕ್ಕಾಗಿ ವಿವಿಧ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.