<p><strong>ನವದೆಹಲಿ: </strong>ಕೇಂದ್ರ ಸರ್ಕಾರ ತನ್ನ ಒಡೆತನದ ಭಾರತೀಯ ಜೀವ ವಿಮಾ ನಿಗಮದಲ್ಲಿನ (ಎಲ್ಐಸಿ) ಷೇರು ವಿಕ್ರಯಕ್ಕೆ ತೀರ್ಮಾನಿಸಿದೆ. ಎಲ್ಐಸಿಯಲ್ಲಿ ಹೊಂದಿರುವ ಕೆಲ ಷೇರುಗಳನ್ನು ಮಾರಾಟ ಮಾಡುವುದಾಗಿ ಹಣಕಾಸು ಸಚಿವೆ ಶನಿವಾರ ಘೋಷಿಸಿದ್ದಾರೆ.</p>.<p>ಬರುವ ಏಪ್ರಿಲ್ನಿಂದ ಷೇರು ವಿನಿಮಯ ಕೇಂದ್ರಗಳಲ್ಲಿ ಎಲ್ಐಸಿಯ ಲಿಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಪ್ರಾರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಮೂಲಕ ಈ ಷೇರುಗಳ ವಿಕ್ರಯಕ್ಕೆ ಸರ್ಕಾರ ಮುಂದಾಗಲಿದೆ ಎಂದು ಅವರು ತಿಳಿಸಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ಬೃಹತ್ ಮೊತ್ತದ ಐಪಿಒ ಎನಿಸಲಿದೆ.</p>.<p>1956ರಲ್ಲಿ ಸ್ಥಾಪನೆಗೊಂಡಿರುವ ಎಲ್ಐಸಿಯಲ್ಲಿ ಸರ್ಕಾರ ಶೇ 100ರಷ್ಟು ಪಾಲನ್ನು ಹೊಂದಿದೆ. ‘ಎಲ್ಐಸಿ ಮೌಲ್ಯವನ್ನು ₹10ಲಕ್ಷ ಕೋಟಿ ಎಂದು ಅಂದಾಜಿಸಬಹುದು. ಇದರಲ್ಲಿ ಶೇಕಡ 5ರಷ್ಟು ಷೇರು ವಿಕ್ರಯ ಮಾಡಿದರೂ ಸರ್ಕಾರಕ್ಕೆ ₹50 ಸಾವಿರ ಕೋಟಿ ದೊರೆಯಲಿದೆ. ಇದರಿಂದ ವಿತ್ತೀಯ ಕೊರತೆಯನ್ನು ನೀಗಿಸಿಕೊಳ್ಳಲು ಅನುಕೂಲವಾಗಬಹುದು’ ಎಂದು ಸ್ಯಾಮ್ಕೊ ಸೆಕ್ಯೂರಿಟಿಸ್ನ ಸಿಇಒ ಜಿಮೀತ್ ಮೋದಿ ವಿಶ್ಲೇಷಿಸಿದ್ದಾರೆ.</p>.<p><strong>ತೆರಿಗೆ ವ್ಯಾಜ್ಯ ಇತ್ಯರ್ಥಕ್ಕೆ ಯೋಜನೆ</strong></p>.<p>ನೇರ ತೆರಿಗೆ ವ್ಯಾಜ್ಯಗಳನ್ನು ಇತ್ಯರ್ಥಪಡಿಸಲು ‘ವಿವಾದ್ ಸೆ ವಿಶ್ವಾಸ್’ ಯೋಜನೆಯನ್ನು ಘೋಷಿಸಲಾಗಿದೆ.<strong></strong>ಸದ್ಯ, 4.83 ಲಕ್ಷ ನೇರ ತೆರಿಗೆ ಪ್ರಕರಣಗಳು ಇತ್ಯರ್ಥವಾಗದೇ ಬಾಕಿ ಉಳಿದಿವೆ. ಹೊಸ ಯೋಜನೆಯಲ್ಲಿ ತೆರಿಗೆದಾರರು 2020ರ ಮಾರ್ಚ್ 31ರ ಒಳಗಾಗಿ ಬಾಕಿ ಉಳಿಸಿಕೊಂಡಿರುವ ತೆರಿಗೆ ಪಾವತಿಸಿದರೆ, ಬಡ್ಡಿದರ ಮತ್ತು ದಂಡದಿಂದ ವಿನಾಯ್ತಿ ಪಡೆಯಬಹುದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೇಂದ್ರ ಸರ್ಕಾರ ತನ್ನ ಒಡೆತನದ ಭಾರತೀಯ ಜೀವ ವಿಮಾ ನಿಗಮದಲ್ಲಿನ (ಎಲ್ಐಸಿ) ಷೇರು ವಿಕ್ರಯಕ್ಕೆ ತೀರ್ಮಾನಿಸಿದೆ. ಎಲ್ಐಸಿಯಲ್ಲಿ ಹೊಂದಿರುವ ಕೆಲ ಷೇರುಗಳನ್ನು ಮಾರಾಟ ಮಾಡುವುದಾಗಿ ಹಣಕಾಸು ಸಚಿವೆ ಶನಿವಾರ ಘೋಷಿಸಿದ್ದಾರೆ.</p>.<p>ಬರುವ ಏಪ್ರಿಲ್ನಿಂದ ಷೇರು ವಿನಿಮಯ ಕೇಂದ್ರಗಳಲ್ಲಿ ಎಲ್ಐಸಿಯ ಲಿಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಪ್ರಾರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಮೂಲಕ ಈ ಷೇರುಗಳ ವಿಕ್ರಯಕ್ಕೆ ಸರ್ಕಾರ ಮುಂದಾಗಲಿದೆ ಎಂದು ಅವರು ತಿಳಿಸಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ಬೃಹತ್ ಮೊತ್ತದ ಐಪಿಒ ಎನಿಸಲಿದೆ.</p>.<p>1956ರಲ್ಲಿ ಸ್ಥಾಪನೆಗೊಂಡಿರುವ ಎಲ್ಐಸಿಯಲ್ಲಿ ಸರ್ಕಾರ ಶೇ 100ರಷ್ಟು ಪಾಲನ್ನು ಹೊಂದಿದೆ. ‘ಎಲ್ಐಸಿ ಮೌಲ್ಯವನ್ನು ₹10ಲಕ್ಷ ಕೋಟಿ ಎಂದು ಅಂದಾಜಿಸಬಹುದು. ಇದರಲ್ಲಿ ಶೇಕಡ 5ರಷ್ಟು ಷೇರು ವಿಕ್ರಯ ಮಾಡಿದರೂ ಸರ್ಕಾರಕ್ಕೆ ₹50 ಸಾವಿರ ಕೋಟಿ ದೊರೆಯಲಿದೆ. ಇದರಿಂದ ವಿತ್ತೀಯ ಕೊರತೆಯನ್ನು ನೀಗಿಸಿಕೊಳ್ಳಲು ಅನುಕೂಲವಾಗಬಹುದು’ ಎಂದು ಸ್ಯಾಮ್ಕೊ ಸೆಕ್ಯೂರಿಟಿಸ್ನ ಸಿಇಒ ಜಿಮೀತ್ ಮೋದಿ ವಿಶ್ಲೇಷಿಸಿದ್ದಾರೆ.</p>.<p><strong>ತೆರಿಗೆ ವ್ಯಾಜ್ಯ ಇತ್ಯರ್ಥಕ್ಕೆ ಯೋಜನೆ</strong></p>.<p>ನೇರ ತೆರಿಗೆ ವ್ಯಾಜ್ಯಗಳನ್ನು ಇತ್ಯರ್ಥಪಡಿಸಲು ‘ವಿವಾದ್ ಸೆ ವಿಶ್ವಾಸ್’ ಯೋಜನೆಯನ್ನು ಘೋಷಿಸಲಾಗಿದೆ.<strong></strong>ಸದ್ಯ, 4.83 ಲಕ್ಷ ನೇರ ತೆರಿಗೆ ಪ್ರಕರಣಗಳು ಇತ್ಯರ್ಥವಾಗದೇ ಬಾಕಿ ಉಳಿದಿವೆ. ಹೊಸ ಯೋಜನೆಯಲ್ಲಿ ತೆರಿಗೆದಾರರು 2020ರ ಮಾರ್ಚ್ 31ರ ಒಳಗಾಗಿ ಬಾಕಿ ಉಳಿಸಿಕೊಂಡಿರುವ ತೆರಿಗೆ ಪಾವತಿಸಿದರೆ, ಬಡ್ಡಿದರ ಮತ್ತು ದಂಡದಿಂದ ವಿನಾಯ್ತಿ ಪಡೆಯಬಹುದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>