ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಕರ್ನಾಟಕ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಒತ್ತು: ಸಚಿವ ಸುಧಾಕರ್

Last Updated 4 ಮಾರ್ಚ್ 2022, 12:27 IST
ಅಕ್ಷರ ಗಾತ್ರ

ಬೆಂಗಳೂರು: ಆರೋಗ್ಯ ಕರ್ನಾಟಕ ನಿರ್ಮಾಣಕ್ಕಾಗಿ ಬಜೆಟ್‌ನಲ್ಲಿ ಒತ್ತು ನೀಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

‘ನವಭಾರತಕ್ಕಾಗಿ ನವಕರ್ನಾಟಕ. ಆರೋಗ್ಯ ಕರ್ನಾಟಕ ನಿರ್ಮಾಣಕ್ಕಾಗಿ ಬಜೆಟ್‌ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚು ಒತ್ತು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳು’ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ರಸ್ತೆ ಅಪಘಾತದಲ್ಲಿ ಗಾಯಗೊಂಡವರ ತುರ್ತು ಚಿಕಿತ್ಸೆಗೆ ತುಮಕೂರಿನಲ್ಲಿ ₹20 ಕೋಟಿ ವೆಚ್ಚದಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ. ಬೆಂಗಳೂರು ನಗರದ ನಾಲ್ಕು ಭಾಗಗಳಲ್ಲಿ 500 ಹಾಸಿಗೆ ಸಾಮರ್ಥ್ಯದ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆಗೆ ಯೋಜನೆ. ಘೋಷಿಸಿರುವ ವಿಚಾರವನ್ನೂ ಅವರು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT