<p>ನವದೆಹಲಿ (ಪಿಟಿಐ): ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಕೆಟ್ಟ ಪರಿಣಾಮ ಕಡಿಮೆ ಮಾಡಲು ಕೇಂದ್ರ ಸರ್ಕಾರ ತೆಗೆದುಕೊಂಡ ಕೆಲವು ಕ್ರಮಗಳ ಪರಿಣಾಮವಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ವಿತ್ತೀಯ ಕೊರತೆಯು ಅಲ್ಪ ಹೆಚ್ಚಳ ಕಾಣಬಹುದು ಎಂದು ಸಂಶೋಧನಾ ಸಂಸ್ಥೆ ಬಿಎಂಐ ಬುಧವಾರ ಹೇಳಿದೆ.</p>.<p>ವಿತ್ತೀಯ ಕೊರತೆ ಪ್ರಮಾಣವು ದೇಶದ ಜಿಡಿಪಿಯ ಶೇ 4.3ರಷ್ಟು ಆಗಬಹುದು ಎಂದು ಈ ಬಾರಿಯ ಬಜೆಟ್ನಲ್ಲಿ ಅಂದಾಜು ಮಾಡಲಾಗಿದೆ. ಆದರೆ ಅದು ಆ ಅಂದಾಜನ್ನು ಮೀರಿ ಶೇ 4.5ರಷ್ಟು ಆಗಬಹುದು ಎಂದು ಬಿಎಂಐ ಹೇಳಿದೆ.</p>.<p>ಬಹಳ ವಿರಳವಾದ ಸಂಪನ್ಮೂಲಗಳಾದ ಹಾಗೂ ಸೆಮಿಕಂಡಕ್ಟರ್ ಚಿಪ್ಗಳ ಉತ್ಪಾದನೆಯಲ್ಲಿ ಬಳಕೆ ಮಾಡುವ ಹೀಲಿಯಂ ಮತ್ತು ಗಂಧಕದ ರಫ್ತಿನ ಮೇಲೆ ಕೇಂದ್ರ ಸರ್ಕಾರವು ನಿರ್ಬಂಧ ವಿಧಿಸುವ ಸಾಧ್ಯತೆ ಇದೆ ಎಂದು ಅದು ಹೇಳಿದೆ.</p>.<p>ಗಂಧಕವನ್ನು ರಸಗೊಬ್ಬರಗಳ ತಯಾರಿಕೆಯಲ್ಲಿ ಕೂಡ ಬಳಕೆ ಮಾಡಲಾಗುತ್ತದೆ. ಕೃಷಿ ವಲಯದಲ್ಲಿ ಯಾವುದೇ ಅಡ್ಡಿಗಳು ಸೃಷ್ಟಿಯಾಗದಂತೆ ನೋಡಿಕೊಳ್ಳಲು ಕೇಂದ್ರವು ಶ್ರಮಿಸಲಿದೆ ಎಂದಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-51-1303284586</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಕೆಟ್ಟ ಪರಿಣಾಮ ಕಡಿಮೆ ಮಾಡಲು ಕೇಂದ್ರ ಸರ್ಕಾರ ತೆಗೆದುಕೊಂಡ ಕೆಲವು ಕ್ರಮಗಳ ಪರಿಣಾಮವಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ವಿತ್ತೀಯ ಕೊರತೆಯು ಅಲ್ಪ ಹೆಚ್ಚಳ ಕಾಣಬಹುದು ಎಂದು ಸಂಶೋಧನಾ ಸಂಸ್ಥೆ ಬಿಎಂಐ ಬುಧವಾರ ಹೇಳಿದೆ.</p>.<p>ವಿತ್ತೀಯ ಕೊರತೆ ಪ್ರಮಾಣವು ದೇಶದ ಜಿಡಿಪಿಯ ಶೇ 4.3ರಷ್ಟು ಆಗಬಹುದು ಎಂದು ಈ ಬಾರಿಯ ಬಜೆಟ್ನಲ್ಲಿ ಅಂದಾಜು ಮಾಡಲಾಗಿದೆ. ಆದರೆ ಅದು ಆ ಅಂದಾಜನ್ನು ಮೀರಿ ಶೇ 4.5ರಷ್ಟು ಆಗಬಹುದು ಎಂದು ಬಿಎಂಐ ಹೇಳಿದೆ.</p>.<p>ಬಹಳ ವಿರಳವಾದ ಸಂಪನ್ಮೂಲಗಳಾದ ಹಾಗೂ ಸೆಮಿಕಂಡಕ್ಟರ್ ಚಿಪ್ಗಳ ಉತ್ಪಾದನೆಯಲ್ಲಿ ಬಳಕೆ ಮಾಡುವ ಹೀಲಿಯಂ ಮತ್ತು ಗಂಧಕದ ರಫ್ತಿನ ಮೇಲೆ ಕೇಂದ್ರ ಸರ್ಕಾರವು ನಿರ್ಬಂಧ ವಿಧಿಸುವ ಸಾಧ್ಯತೆ ಇದೆ ಎಂದು ಅದು ಹೇಳಿದೆ.</p>.<p>ಗಂಧಕವನ್ನು ರಸಗೊಬ್ಬರಗಳ ತಯಾರಿಕೆಯಲ್ಲಿ ಕೂಡ ಬಳಕೆ ಮಾಡಲಾಗುತ್ತದೆ. ಕೃಷಿ ವಲಯದಲ್ಲಿ ಯಾವುದೇ ಅಡ್ಡಿಗಳು ಸೃಷ್ಟಿಯಾಗದಂತೆ ನೋಡಿಕೊಳ್ಳಲು ಕೇಂದ್ರವು ಶ್ರಮಿಸಲಿದೆ ಎಂದಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-51-1303284586</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>